News Karnataka Kannada
Saturday, April 20 2024
Cricket
ಚಿಕಮಗಳೂರು

ಕಾಂಗ್ರೆಸ್ ಅಲ್‍ಖೈದಾ ಮೇಲೆ ಕರುಣೆ ತೋರುತ್ತಿದೆ; ಸಿ.ಟಿ ರವಿ

Bengaluru: Siddaramaiah can't compete on the issue of lies, says CT Ravi
Photo Credit :

ಚಿಕ್ಕಮಗಳೂರು : ಅಲ್‍ಖೈದಾ-ಕಾಂಗ್ರೆಸ್ ಒಂದೇ ಕಡೆ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೋಲಿಕೆ ಮಾಡುವುದಾದರೆ ಕಾಂಗ್ರೆಸ್-ಅಲ್‍ಖೈದಾ ಮಧ್ಯೆ ಹೋಲಿಕೆ ಮಾಡಬೇಕು. ಸೂತ್ರದಾರಿ ಅಲ್‍ಖೈದಾನೋ, ಪಾತ್ರದಾರಿ ಕಾಂಗ್ರೆಸ್ಸೋ ಗೊತ್ತಿಲ್ಲ ಅದು ಗೊತ್ತಾಗಬೇಕಿದೆ ಎಂದು ಅಲ್‍ಖೈದಾ ವಿಡಿಯೋ ಕುರಿತು ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ತಿರುಗೇಟು ನೀಡಿದರು.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಸೋಲಿನ ಹತಾಶೆಯಿಂದ ಬುದ್ಧಿ ಭ್ರಮಣೆಯಾದಂತೆ ಮಾತನಾಡುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ 399ರಲ್ಲಿ ಸ್ಪರ್ಧೆ ಮಾಡಿ 387ರಲ್ಲಿ ಠೇವಣಿ ಹೋದರೆ ಹತಾಶೆ ಕಾಡುತ್ತದೆ, ಪಂಜಾಬ್‍ ನಲ್ಲೂ ಸರ್ಕಾರ ಕಳೆದುಕೊಂಡು ಹತಾಶರಾಗಿ ಬುದ್ದಿ ಭ್ರಮಣೆಯಾದಂತೆ ಮಾತನಾಡುತ್ತಿದ್ದಾರೆ ಎಂದರು.

ಆರ್ ಎಸ್‌ಎಸ್ ದೇಶಭಕ್ತ ಹಾಗೂ ದೇಶ ಕಾಯುವ ಸಂಘಟನೆ. ಅಲ್‍ಖೈದಾ ಬಾಂಬಿನ ಮೇಲೆ ವಿಶ್ವಾಸವಿಟ್ಟಿರುವ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆ. ಇವೆರಡರ ನಡುವೆ ಹೋಲಿಕೆ ಬುದ್ಧಿ ಇಲ್ಲದವರು ಮಾತ್ರ ಮಾಡುತ್ತಾರೆ. ಕಾಂಗ್ರೆಸ್ಸಿಗರು ಅಲ್‍ಖೈದಾ ಮೇಲೆ ಕರುಣೆ ತೋರುತ್ತಿದ್ದಾರೆ. ರಾಷ್ಟ್ರಭಕ್ತ ಸಂಘಟನೆ ಜೊತೆ ಹೋಲಿಕೆ ಮಾಡುತ್ತಾ ಕಾಂಗ್ರೆಸ್ ಅಲ್‍ಖೈದಾಗೆ ವಕಾಲತ್ತು ವಹಿಸುತ್ತಿದೆ ಎಂದು ಸಿ.ಟಿ ರವಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು