ಚಿಕ್ಕಮಗಳೂರು : ವಿಶ್ವಹಿಂದೂ ಪರಿಷತ್-ಬಜರಂಗದಳ ವತಿಯಿಂದ ಹಮ್ಮಿಕೊಳ್ಳಲಾಗಿರುವ ದತ್ತ ಜಯಂತಿ ಅಂಗವಾಗಿ ಶುಕ್ರವಾರ ಅನಸೂಯ ಮಾತೆ ಪೂಜೆ ಹಾಗೂ ಮಹಿಳೆಯರಿಂದ ಬೃಹತ್ ಸಂಕೀರ್ತನಾ ಯಾತ್ರೆ ನಡೆಯಿತು.
ಕೇಸರಿ ಶಾಲು, ರುಮಾಲು ಧರಿಸಿ ಭಗವಾಧ್ವಜಗಳನ್ನು ಹಿಡಿದ ಮಹಿಳೆಯರು ದತ್ತಾತ್ರೇಯರ ಪರ ಘೋಷಣೆಗಳನ್ನು ಕೂಗುತ್ತ ದೇವರ ಸಂಕೀರ್ತನೆ ಮಾಡುತ್ತಾ ಮೆರವಣಿಗೆಯಲ್ಲಿ ಸಾಗಿ ಬಂದರು.
ಬೆಳಗ್ಗೆ ಬೋಳರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಭಕ್ತರು ದತ್ತಾತ್ರೇಯರ ಭಾವಚಿತ್ರವನ್ನು ಹಿಡಿದು ದೇವಸ್ಥಾನದ ಆವರಣದಲ್ಲೇ ಭಜನೆ ನಡೆಸಿದರು.
೨ ಸಾವಿರಕ್ಕೂ ಹೆಚ್ಚಿದ್ದ ಮಹಿಳೆಯರು ಐಜಿ ರಸ್ತೆ, ಆರ್.ಜಿರಸ್ತೆ ಮೂಲಕ ಕಾಮಧೇನು ಗಣಪತಿ ದೇವಸ್ಥಾದ ವರೆಗೆ ಮೆರವಣಿಗೆಯಲ್ಲಿ ತೆರಳಿ ಅಲ್ಲಿಂದ ಕೆಎಸ್ಆರ್ಟಿಸಿ ಬಸ್ಗಳು ಹಾಗೂ ಖಾಸಗಿ ವಾಹನಗಳಲ್ಲಿ ದತ್ತಪೀಠಕ್ಕೆ ತೆರಳಿದರು.
ವಿಶ್ವಹಿಂದೂ ಪರಿಷತ್ ಅಖಿಲ ಭಾರತೀಯ ಉಪಾಧ್ಯಕ್ಷರಾದ ಡಾ.ವಿಜಯಲಕ್ಷ್ಮಿ ದೇವಮಾನೆ, ಜಿ.ಪಂ.ಮಾಜಿ ಸದಸದಸ್ಯರುಗಳಾದ ಜಸಿಂತ ಅನಿಲ್ ಕುಮಾರ್, ಕವಿತಾ ಲಿಂಗರಾಜು, ತಾ.ಪಂ. ಮಾಜಿ ಅಧ್ಯಕ್ಷರು, ಸದಸ್ಯರುಗಳಾದ ರೇಖಾ ಅನಿಲ್, ವಿಶಾಖ, ಭವ್ಯ ನಟೇಶ್, ಸುವರ್ಣ ಕೇಶವಮೂರ್ತಿ ಇತರರು ಭಾಗವಹಿಸಿದ್ದರು.