News Karnataka Kannada
Friday, April 19 2024
Cricket
ಚಿಕಮಗಳೂರು

ದತ್ತ ಜಯಂತಿ: ಚಿಕ್ಕಮಗಳೂರಿನಲ್ಲಿ ಮಹಿಳೆಯರಿಂದ ಬೃಹತ್ ಸಂಕೀರ್ತನಾ ಯಾತ್ರೆ

Inauguration of administrative office of Federation of Bunts Associations at Mulki on April 5
Photo Credit :

ಚಿಕ್ಕಮಗಳೂರು : ವಿಶ್ವಹಿಂದೂ ಪರಿಷತ್-ಬಜರಂಗದಳ ವತಿಯಿಂದ ಹಮ್ಮಿಕೊಳ್ಳಲಾಗಿರುವ ದತ್ತ ಜಯಂತಿ ಅಂಗವಾಗಿ ಶುಕ್ರವಾರ ಅನಸೂಯ ಮಾತೆ ಪೂಜೆ ಹಾಗೂ ಮಹಿಳೆಯರಿಂದ ಬೃಹತ್ ಸಂಕೀರ್ತನಾ ಯಾತ್ರೆ ನಡೆಯಿತು.

ಕೇಸರಿ ಶಾಲು, ರುಮಾಲು ಧರಿಸಿ ಭಗವಾಧ್ವಜಗಳನ್ನು ಹಿಡಿದ ಮಹಿಳೆಯರು ದತ್ತಾತ್ರೇಯರ ಪರ ಘೋಷಣೆಗಳನ್ನು ಕೂಗುತ್ತ ದೇವರ ಸಂಕೀರ್ತನೆ ಮಾಡುತ್ತಾ ಮೆರವಣಿಗೆಯಲ್ಲಿ ಸಾಗಿ ಬಂದರು.

ಬೆಳಗ್ಗೆ ಬೋಳರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಭಕ್ತರು ದತ್ತಾತ್ರೇಯರ ಭಾವಚಿತ್ರವನ್ನು ಹಿಡಿದು ದೇವಸ್ಥಾನದ ಆವರಣದಲ್ಲೇ ಭಜನೆ ನಡೆಸಿದರು.

೨ ಸಾವಿರಕ್ಕೂ ಹೆಚ್ಚಿದ್ದ ಮಹಿಳೆಯರು ಐಜಿ ರಸ್ತೆ, ಆರ್.ಜಿರಸ್ತೆ ಮೂಲಕ ಕಾಮಧೇನು ಗಣಪತಿ ದೇವಸ್ಥಾದ ವರೆಗೆ ಮೆರವಣಿಗೆಯಲ್ಲಿ ತೆರಳಿ ಅಲ್ಲಿಂದ ಕೆಎಸ್‌ಆರ್‌ಟಿಸಿ ಬಸ್‌ಗಳು ಹಾಗೂ ಖಾಸಗಿ ವಾಹನಗಳಲ್ಲಿ ದತ್ತಪೀಠಕ್ಕೆ ತೆರಳಿದರು.

ವಿಶ್ವಹಿಂದೂ ಪರಿಷತ್ ಅಖಿಲ ಭಾರತೀಯ ಉಪಾಧ್ಯಕ್ಷರಾದ ಡಾ.ವಿಜಯಲಕ್ಷ್ಮಿ ದೇವಮಾನೆ, ಜಿ.ಪಂ.ಮಾಜಿ ಸದಸದಸ್ಯರುಗಳಾದ ಜಸಿಂತ ಅನಿಲ್ ಕುಮಾರ್, ಕವಿತಾ ಲಿಂಗರಾಜು, ತಾ.ಪಂ. ಮಾಜಿ ಅಧ್ಯಕ್ಷರು, ಸದಸ್ಯರುಗಳಾದ ರೇಖಾ ಅನಿಲ್, ವಿಶಾಖ, ಭವ್ಯ ನಟೇಶ್, ಸುವರ್ಣ ಕೇಶವಮೂರ್ತಿ ಇತರರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು