News Kannada
Monday, March 27 2023

ಚಿಕಮಗಳೂರು

2022ರ ಶೈಕ್ಷಣಿಕ ವರ್ಷ ಆರಂಭವಾಗುವ ಮುನ್ನ ಕೇಂದ್ರಿಯ ವಿದ್ಯಾಲಯ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ : ಶೋಭಾ ಕರಂದ್ಲಾಜೆ

Photo Credit :

ಚಿಕ್ಕಮಗಳೂರು: 2022 ರ ಶೈಕ್ಷಣಿಕ ವರ್ಷ ಆರಂಭವಾಗುವ ಮುನ್ನ, ಕೇಂದ್ರಿಯ ವಿದ್ಯಾಲಯ ಕಾಮಗಾರಿಯನ್ನು ಪರಿಪೂರ್ಣ ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಕೇಂದ್ರ ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಗುರುವಾರ ನಗರ ಸಮೀಪದ ಕದ್ರಿಮಿದ್ರಿ ಬಳಿ ನಿರ್ಮಾಣವಾಗುತ್ತಿರುವ ಕೇಂದ್ರಿಯ ವಿದ್ಯಾಲಯದ ಕಾಮಗಾರಿಯನ್ನು ಪರಿಶೀಲನೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕೇಂದ್ರಿಯ ವಿದ್ಯಾಲಯ ಆರಂಭವಾಗಬೇಕು ಎಂಬುದು ದಶಕಗಳ ಕನಸು. ಅದರಂತೆ ಜಿಲ್ಲೆಗೆ ವಿದ್ಯಾಲಯ ಮಂಜೂರಾಗಿ ತಾತ್ಕಾಲಿಕ ಕಟ್ಟಡದಲ್ಲಿ ಶಾಲೆಗಳು ಆರಂಭವಾಗಿವೆ. ಪೂರ್ಣ ಪ್ರಮಾಣದಲ್ಲಿ ಸ್ವಂತ ಕಟ್ಟಡದಲ್ಲಿಯೇ ಶಾಲೆ ಆರಂಭಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಕಳೆದ ಬಜೆಟ್‌ನಲ್ಲಿ ಜಿಲ್ಲೆಯಲ್ಲಿ ಕೇಂದ್ರಿಯ ವಿದ್ಯಾಲಯ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆಗೊಳಿಸಿದ್ದು ಇದೀಗ ಕಾಮಗಾರಿ ಆರಂಭಗೊಂಡಿದೆ ಎಂದು ಮಾಹಿತಿ ನೀಡಿದರು.

ಕೇಂದ್ರಿಯ ವಿದ್ಯಾಲಯವು ಸುಮಾರು 10 ಎಕರೆ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿದ್ದು ಬೋಧನಾ ಕೊಠಡಿ, ಆಟದ ಮೈದಾನ, ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿರಲಿದೆ. ಮುಂದಿನ 2022 ಶೈಕ್ಷಣಿಕ ವರ್ಷ ಆರಂಭವಾಗುವ ಮುನ್ನ ಜೂನ್ ಅಂತ್ಯದೊಳಗೆ ಸಂಪೂರ್ಣ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಈ ಭಾಗದಲ್ಲಿ ಕೇಂದ್ರಿಯ ವಿದ್ಯಾಲಯ ಸುತ್ತಮುತ್ತಲಿನ ವಾತಾವರಣ ಪ್ರಶಾಂತತೆಯಿಂದ ಕೂಡಿದ್ದು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲಿದೆ, ಇಳಿಜಾರು ಇರುವ ಕಾರಣ ಇಲ್ಲಿನ ಜಾಗವನ್ನು ಸಮತಟ್ಟುಗೊಳಿಸಿ ಸಮರ್ಪಕವಾಗಿ ಕಟ್ಟಡ ನಿರ್ಮಾಣ ಮಾಡುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್.ಭೋಜೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಸಿ.ಕಲ್ಮರುಡಪ್ಪ, ನಗರ ಮಂಡಲ ಅಧ್ಯಕ್ಷ ಮಧುಕುಮಾರ್ ರಾಜ್ ಅರಸ್, ಗ್ರಾಮಾಂತರ ಮಂಡಲ ಅಧ್ಯಕ್ಷ ಈಶ್ವರಹಳ್ಳಿ ಮಹೇಶ್, ದಿನೇಶ್ ಸೇರಿದಂತೆ ಮತ್ತಿತರರು ಇದ್ದರು.

See also  ಸಂಸ್ಕೃತ ವಿವಿ ಸ್ಥಾಪಿಸುವ ವಿಚಾರದಲ್ಲಿ ಕೇವಲ ಸಂಕುಚಿತ ಭಾವನೆಯಿಂದ ಯೋಚಿಸಬಾರದು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು