News Kannada
Saturday, March 25 2023

ಚಿಕಮಗಳೂರು

ಕೇಂದ್ರ ಬಜೆಟ್ ದೇಶದ ನಾರೀ ಶಕ್ತಿಗೆ ಹೊಸ ನಾಂದಿ ಹಾಡಿದೆ – ಶ್ಯಾಮಲಾ ಎಸ್.ಕುಂದರ್

The Union Budget has given a new impetus to the country
Photo Credit : News Kannada

ಚಿಕ್ಕಮಗಳೂರು: ಈ ಬಾರಿಯ ಕೇಂದ್ರ ಬಜೆಟ್ ದೇಶದ ನಾರೀ ಶಕ್ತಿಗೆ ಹೊಸ ನಾಂದಿ ಹಾಡಿದೆ ಎಂದು ಬಿಜೆಪಿ ನಾಯಕಿ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್.ಕುಂದರ್ ಹೇಳಿದರು.

ಅವರು ಶನಿವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಬಜೆಟ್ ಬಗೆಗಿನ ಸಂವಾದ ಮತ್ತು ಮಾಹಿತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ಬೇಟಿ, ಪಡಾವೋ, ಬೇಟಿ ಬಚಾವೋ ಕಾರ್ಯಕ್ರಮ ಮೂಲಕ ಮಹಿಳೆಯರನ್ನು ಶಸಕ್ತಗೊಳಿಸುವ ಯೋಜನೆಗೆ ಈ ಬಾರಿಯೂ ಕೇಂದ್ರ ಬಜೆಟ್‌ನಲ್ಲಿ ಆಧ್ಯತೆ ನೀಡಿರುವುದು ಸ್ವಾಗತಾರ್ಹ ಎಂದರು.

ಹೆಣ್ಣುಮಕ್ಕಳಿಗೆ ಸೈನಿಕ ಶಾಲೆ ತೆರೆಯುವ ಮೂಲಕ ರಕ್ಷಣಾ ವಲಯದಲ್ಲೂ ಮಹಿಳೆ ಸಮರ್ಥಳು ಎನ್ನುವುದನ್ನು ಪ್ರಧಾನಿ ಮೋದಿ ಅವರು ಪ್ರಪಂಚಕ್ಕೆ ತೋರಿಸಿಕೊಟ್ಟಿದ್ದಾರೆ.

ರಾಷ್ಟ್ರೀಯ ಶಿಕ್ಷಣ ಜಾರಿಗೆ ತಂದಿದ್ದು, ಕರ್ನಾಟಕದಲ್ಲಿ ಇಡೀ ದೇಶದಲ್ಲೇ ಮೊದಲ ಬಾರಿಗೆ ಜಾರಿಗೆ ತಂದಿರುವುದು ಹೆಮ್ಮೆಯ ವಿಚಾರ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಉಚಿತ ವಿದ್ಯುತ್, ತೆರಿಗೆ ಪದ್ಧತಿಯಲ್ಲಿ ಸರಳೀಕರಣ ಮಾಡಿ ಮಧ್ಯಮ ವರ್ಗದ ಜನತೆ ಜೊತೆ ನಾವಿದ್ದೇವೆ ಎಂದು ಸಂದೇಶವನ್ನು ಕೇಂದ್ರ ಸರ್ಕಾರ ನೀಡಿದೆ ಎಂದರು.

ಭದ್ರಾ ಮೇಲ್ದಂಡೆ ವಿಚಾರದಲ್ಲಿ ೫ ದಶಕಗಳ ಕನಸು ನನಸಾಗಿದೆ. ೫೩೦೦ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ. ದೇಶದ ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸುತ್ತೇವೆ ಎಂದರು.

See also  ಚಿಕ್ಕಮಗಳೂರು: ಮನೆಯವರ ಭಯ- ಎರಡೆರಡು ಭಾರಿ ಮದುವೆಯಾದ ಪ್ರೇಮಿಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು