News Kannada
Wednesday, March 29 2023

ಚಿಕಮಗಳೂರು

ಚಿಕ್ಕಮಗಳೂರು: ಹರಿಹರದಹಳ್ಳಿ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ

Hariharadahalli Gram Panchayat gets Gandhi Grama Puraskaram
Photo Credit : News Kannada

ಚಿಕ್ಕಮಗಳೂರು: ತಾಲ್ಲೂಕಿನ ಹರಿಹರದಹಳ್ಳಿ ಗ್ರಾಮ ಪಂಚಾಯಿತಿಯು ೨೦೨೧-೨೨ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಐದು ಲಕ್ಷ ರೂ. ನಗದು ಬಿಡುಗಡೆಗೊಳಿಸಿ ಪ್ರೋತ್ಸಾಹಿಸಿದೆ ಎಂದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಪಿ.ಲಕ್ಷ್ಮಣ್ ಹೇಳಿದ್ದಾರೆ.

ಈ ಸಂಬಂಧ ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಜಿ.ಪಂ. ನೇತೃತ್ವದಲ್ಲಿ ಆಯ್ಕೆ ಸಮಿತಿ ಯ ಮೂಲಕ ಶಿಫಾರಸ್ಸು ಮಾಡಲಾದ ತಾಲ್ಲೂಕಿಗೆ ಒಂದರಂತೆ ಗ್ರಾ.ಪಂ. ಅನ್ನು ರಾಜ್ಯಮಟ್ಟದ ವಿಮರ್ಶೆ ಸಮಿತಿ ಸಭೆಯಲ್ಲಿ ಹರಿಹರದಹಳ್ಳಿಗೆ ಗಾಂಧಿ ಗ್ರಾಮ ಪುರಸ್ಕಾರವನ್ನು ರಾಜ್ಯಪಾಲರ ಆದೇಶಾನುಸಾರ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆ ಘೋಷಿಸಿದೆ ಎಂದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ೯ ತಾಲ್ಲೂಕುಗಳಿಗೆ ಗಾಂಧಿಗ್ರಾಮ ಪುರಸ್ಕಾರ ಲಭಿಸಿದ್ದು ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಹರಿಹರದಹಳ್ಳಿ ಗ್ರಾಮ ಪಂಚಾಯಿತಿಯು ಉತ್ತಮ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಸರ್ಕಾರವು ಗಾಂಧಿ ಪುರಸ್ಕಾರ ಹಾಗೂ ನಗದನ್ನು ನೀಡಿ ಪ್ರೋತ್ಸಾಹಿಸಲಾಗಿದೆ ಎಂದು ತಿಳಿಸಿದ್ದಾರೆ.

See also  ಭದ್ರಾ ಅಭಯಾರಣ್ಯದಲ್ಲಿ ಕಟ್ಟಡ ನಿರ್ಮಾಣದಿಂದ ವನ್ಯಸಂಪತ್ತಿಗೆ ಆಪತ್ತು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು