News Kannada
Thursday, March 23 2023

ಚಿಕಮಗಳೂರು

ಚಿಕ್ಕಮಗಳೂರು: ಫೆ.೨೦ ರಂದು ಜಿಲ್ಲೆಯ ಅಡಿಕೆ ಬೆಳೆಗಾರರೊಂದಿಗೆ ಜೆ.ಪಿ.ನಡ್ಡಾ ಸಭೆ

Jp Nadda holds meeting with arecanut growers in Chikkamagaluru district
Photo Credit : News Kannada

ಚಿಕ್ಕಮಗಳೂರು: ಶೃಂಗೇರಿಯ ವಿಧಾನಸಭಾ ಕ್ಷೇತ್ರದ ಕೊಪ್ಪಕ್ಕೆ ಫೆ.೨೦ ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಆಗಮಿಸಿ ಅಡಿಕೆ ಬೆಳೆಗಾರರ ಜೊತೆ ಸಭೆಯನ್ನು ನಡೆಸುವರು. ನಂತರ ಶೃಂಗೇರಿಯ ವಿಧಾನಸಭಾ ಕ್ಷೇತ್ರದ ಚುನಾಯಿತ ಪ್ರತಿನಿಧಿಗಳ ಜೊತೆ ಮುಂದಿನ ಚುನಾವಣೆ ತಯಾರಿಯ ಬಗ್ಗೆ ಸಭೆ ನಡೆಸಿ ಅಲ್ಲಿಂದ ಶೃಂಗೇರಿಗೆ ತೆರಳಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದು ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಸಿ.ಕಲ್ಮರುಡಪ್ಪ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಫೆ.೨೧ ರಂದು ಬೆಳಗ್ಗೆ೯ ಗಂಟೆಗೆ ಶೃಂಗೇರಿಯಿಂದ ಹೊರಟು ಚಿಕ್ಕಮಗಳೂರಿಗೆ ಆಗ ಮಿಸಿ, ಶಾಸಕ ಸಿ.ಟಿ.ರವಿಯವರ ಮನೆಗೆ ಭೇಟಿ ನೀಡುವರು. ನಂತರ ಬೈಕ್ ಜಾಥಾದ ಮುಖಾಂತರ ಕುವೆಂಪು ಕಲಾಮಂದಿರಕ್ಕೆ ೧೦.೩೦ ಕ್ಕೆ ಆಗಮಿಸಲಿದ್ದಾರೆ. ಅಲ್ಲಿ ವಿವಿಧ ಕ್ಷೇತ್ರದ ಗಣ್ಯರೊಡನೆ ಸಭೆಯನ್ನು ನಡೆಸಿ ನಂತರ ಬೇಲೂರಿಗೆ ತೆರಳಲಿದ್ದಾರೆ ಎಂದರು.

ಕಾಂಗ್ರೆಸ್ಸಿಗರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂಬುದನ್ನು ಪದೇ ಪದೇ ಸಾಬೀತು ಪಡಿಸುತ್ತಿದ್ದಾರೆ. ಮೊನ್ನೆ ಅಡಿಕೆ ಬೆಳೆಯ ಬಗ್ಗೆ ಮಾತ ನಾಡಿದ್ದಾರೆ. ಭಾರತೀಯ ಜನತಾ ಪಾರ್ಟಿ ಅಡಿಕೆಗೆ ವಿಶೇಷ ಒತ್ತು ಕೊಟ್ಟು ಕೆಲಸ ಮಾಡಿದ್ದನ್ನು ಜನತೆ ನೋಡಿದ್ದಾರೆ ಎಂದರು.

ಅಡಿಕೆ ಎಲೆ ಚುಕ್ಕಿ ರೋಗಕ್ಕೆ ಪರಿಹಾರ ಕಂಡುಹಿಡಿಯುವ ಹಿನ್ನೆಲೆಯಲ್ಲಿ ೧೦ ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿ ಸ್ಪಂದಿಸಿದ ಸರ್ಕಾರ ನಮ್ಮದು ಎಂದರು.

See also  ರಾಜಕೀಯ ಪ್ರಾತಿನಿಧ್ಯ ಹಾಗೂ ನೇಕಾರರ ಸಮುದಾಯಗಳ ಅಭಿವೃದ್ದಿ ನಿಗಮ ಆರಂಭಿಸಲು ಒತ್ತಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು