News Kannada
Tuesday, March 28 2023

ಚಿಕಮಗಳೂರು

ಚಿಕ್ಕಮಗಳೂರಿನಲ್ಲಿ ಧರೆಗೆ ತಂಪೆರೆದ ವರುಣ!

Bengaluru: A depression in the Bay of Bengal, rains lash Karnataka again
Photo Credit : News Kannada

ಚಿಕ್ಕಮಗಳೂರು: ಬಿಸಿಲ ಬೇಗೆಯಿಂದ ತತ್ತರಿಸಿದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿತ್ತು. ಇದೀಗ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ವರುಣ ಧರೆಗೆ ತಂಪೆರೆದಿದ್ದಾನೆ. ಚಿಕ್ಕಮಗಳೂರು ಜಿಲ್ಲೆ, ಕೊಡಗು ಜಿಲ್ಲೆಯ ಕೆಲವೆಡೆ ಮಳೆ ಸುರಿದಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ವರುಣದೇವ ಕೃಪೆತೋರಿದ್ದು ವರ್ಷದ ಮೊದಲ ಮಳೆಗೆ ಮಲೆನಾಡಿನ ಜನರಲ್ಲಿ ಹರ್ಷ ಮೂಡಿಸಿದೆ.ಮಲೆನಾಡು ಭಾಗದಲ್ಲಿ ಅನೇಕ ಕಡೆ ಇಂದು ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಇಂದು ಮಧ್ಯಾಹ್ನ ಇದ್ದಕ್ಕಿದ್ದಂತೆ ವಾತಾವರಣದಲ್ಲಿ ಬದಲಾವಣೆಯಾಗಿದ್ದು ಮಲೆನಾಡಿನ ಮೂಡಿಗೆರೆ, ಕಳಸ, ಎನ್.ಆರ್.ಪುರ ತಾಲ್ಲೂಕಿನ ಅನೇಕ ಕಡೆ ಅಲ್ಲಲ್ಲಿ ಉತ್ತಮ ಮಳೆಯಾಗಿದೆ.

ಮೂಡಿಗೆರೆ ತಾಲ್ಲೂಕಿನ ಬೆಟ್ಟಗೆರೆ, ದಾರದಹಳ್ಳಿ ಸುತ್ತಮುತ್ತಲ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ.ಕಳಸ ತಾಲ್ಲೂಕಿನ ಮುನ್ನೂರುಪಾಲು, ಬಾಳೆಹೊಳೆ, ಹೊರನಾಡು, ಕಾರಗದ್ದೆ ಸುತ್ತಮುತ್ತ ಗುಡುಗು ಸಹಿತ ಮಳೆಯಾಗಿದೆ. ಎನ್.ಆರ್. ಪುರ ತಾಲ್ಲೂಕಿನ ಬಾಳೆಹೊನ್ನೂರು, ಚಿಕ್ಕ ಅಗ್ರಹಾರ, ಬನ್ನೂರು, ಸಂಗಮೇಶ್ವರ ಪೇಟೆ, ಕೊಪ್ಪ ತಾಲ್ಲೂಕಿನ ಜಯಪುರ ಸುತ್ತಮುತ್ತ ಮಳೆಯಾಗಿದೆ.

ಒಂದೇ ಪ್ರದೇಶದ ಬೇರೆ ಬೇರೆ ಕಡೆ ಮಳೆಯಲ್ಲಿ ವ್ಯತ್ಯಾಸವಾಗಿದೆ. ೫ ಸೆಂಟ್ಸ್ ನಿಂದ ೨ ಇಂಚುವರೆಗೆ ಮಳೆ ಬೇರೆ ಬೇರೆ ಪ್ರದೇಶದಲ್ಲಿ ವ್ಯತ್ಯಾಸವಾಗಿ ಬಿದ್ದಿದೆ. ಉತ್ತಮ ಮಳೆಯಾಗಿರುವ ಪ್ರದೇಶದಲ್ಲಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನು ಕೆಲವು ಕಡೆ ಅಲ್ಪ ಮಳೆಯಾಗಿದ್ದು ಕೃಷಿಕರ ಆತಂಕವನ್ನು ಹೆಚ್ಚಿಸಿದೆ. ಮುಂದಿನ ಮೂರ್ನಾಲ್ಕು ದಿನಗಳ ವರೆಗೆ ರಾಜ್ಯದ ಹಲವು ಭಾಗದಲ್ಲಿ ಮಳೆಯಾಗಲಿದೆ .

See also  ನಾಲ್ಕು ಬೈಕ್‌ ಕದ್ದು ಜಖಂ ಮಾಡಿದ ದುಷ್ಕರ್ಮಿಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು