News Kannada
Friday, March 24 2023

ಚಿಕಮಗಳೂರು

ಚಿಕ್ಕಮಗಳೂರು: ಸೇತುವೆ ಕಾಮಗಾರಿ ವಿಳಂಬ, ಸಾರ್ವಜನಿಕರಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ

Public block roads, protest against delay in construction of bridge in Chikkamagaluru
Photo Credit : News Kannada

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಟ್ಟದಮನೆ ಗ್ರಾಮದಲ್ಲಿ ಹರಿಯುತ್ತಿರುವ ಹೇಮಾವತಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ನೂತನ ಸೇತುವೆ ಕಾಮಗಾರಿಯ ವಿಳಂಬ ಧೋರಣೆ ಖಂಡಿಸಿ ಕಿರುಗುಂದ ಮತ್ತು ಹಂತೂರು ಗ್ರಾಪಂ ವ್ಯಾಪ್ತಿಯ ಸಾರ್ವಜನಿಕರು ರಸ್ತೆತಡೆ ಮೂಲಕ ಪ್ರತಿಭಟನೆ ನಡೆಸಿದರು. ಬೆಟ್ಟದ ಮನೆ ಹೇಮಾವತಿ ನದಿ ಮೇಲ್ಬಾಗದಲ್ಲಿ ಇರುವ ಸೇತುವೆ ಶತಮಾನಗಳ ಹಳೆಯದಾಗಿದ್ದು ಶಿಥಿಲಾವಸ್ಥೆಗೆ ತಲುಪಿದೆ.

ಸರ್ಕಾರ ಸೇತುವೆ ಶಿಥಿಲವಾಗಿದೆ ಎಂದು ನೂತನ ಸೇತುವೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿತ್ತು. ಈ ಸೇತುವೆ ಕಾಮಗಾರಿ ಯ ಗುತ್ತಿಗೆದಾರ ೨೦೧೮ರಿಂದ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಆರಂಭಿಸಿದರೂ ಇದುವರೆಗೂ ಪೂರ್ಣಗೊಳಿಸಿಲ್ಲ. ಆಮೆನಡಿಗೆಯ ಕಾಮಗಾರಿ ನಡೆಸಿ ೫ವರ್ಷ ಕಳೆದರೂ ಸೇತುವೆ ನಿರ್ಮಾಣ ಸಂಪೂರ್ಣವಾಗಿಲ್ಲ. ಈ ವರ್ಷದ ಜನವರಿಯಲ್ಲಿ ಕಾಮಗಾರಿ ಸ್ಥಗಿತಗೊಳಿಸಿ ತೆರಳಿರುವ ಗುತ್ತಿಗೆದಾರ ಇದುವರೆಗೂ ಪತ್ತೆ ಇಲ್ಲ ಇದರಿಂದ ಆಕ್ರೋಶಗೊಂಡ ಜನರು ಪ್ರತಿಭಟನೆ ನಡೆಸಿದರು.

ಚುನಾವಣಾ ಬಹಿಷ್ಕಾರದ ಎಚ್ಚರಿಕೆ: ಇದೀಗ ಹಳೆಯ ಸೇತುವೆಯೂ ಗುಂಡಿಬಿದ್ದು ವಾಹನ ಸಂಚಾರಕ್ಕೆ ತೊಡಕಾಗಿದೆ. ಆದ್ದರಿಂದ ನೂತನ ಸೇತುವೆಯ ಕಾಮಗಾರಿಯನ್ನು ಕೂಡಲೆ ಆರಂಭಿಸಬೇಕೆಂದು ಒತ್ತಾಯಿಸಿ ಸಾರ್ವಜನಿಕರು ಬೆಟ್ಟದಮನೆ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆ ಸ್ಥಳದಲ್ಲಿ ಸುಮಾರು ೧ಗಂಟೆ ರಸ್ತೆತಡೆ ನಡೆಸಿ ಪ್ರತಿಭಟಿಸಿದರು. ಮುಂದಿನ ೧೦ ದಿನದಲ್ಲಿ ಕಾಮಗಾರಿ ಆರಂಭಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ಮತ್ತು ಮುಂಬರುವ ವಿಧಾನಸಭೆ ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.

ಪ್ರತಿಭಟನಾ ನಿರತ ಸ್ಥಳಕ್ಕೆ ಆಗಮಿಸಿದ ಕಿರುಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಮತ್ತು ಪಿ.ಡಿ.ಓ. ಅವರ ಮುಖಾಂತರ ಸರ್ಕಾರಕ್ಕೆ ತಮ್ಮ ಪ್ರತಿಭಟನಾ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರುಗಳು, ವಿವಿಧ ಸಂಘಸಂಸ್ಥೆಗಳ ಮುಖಂಡರು, ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.

See also  ನವದೆಹಲಿ: ವಾಜಪೇಯಿ ಅವರ ಜನ್ಮದಿನ, ಪುಷ್ಪ ನಮನ ಸಲ್ಲಿಸಿದ ನಾಯಕರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು