ಚಿಕ್ಕಮಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ೩.೫೦ ಲಕ್ಷ ರೂ. ನಗದು ಹಾಗೂ 150 ಕ್ವಿಂಟಾಲ್ ಅಕ್ಕಿಯನ್ನು ಚುನಾವಣಾ ಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗದಿಂದ ತರೀಕೆರೆ ಕಡೆಗೆ ತೆರಳುತ್ತಿದ್ದ ಕಾರೊಂದನ್ನು ಚುನಾ ವಣಾಧಿಕಾರಿಗಳು ತರೀಕೆರೆಯ ಎಂಸಿ ಕ್ಯಾಂಪ್ ಚೆಕ್ಪೋಸ್ಟ್ನಲ್ಲಿ ತಡೆದು ತಪಾಸಣೆ ನಡೆಸಿದ ಸಂದರ್ಭದಲ್ಲಿ ಸೂಕ್ತ ದಾಖಲೆಗಳಿಲ್ಲದ ೩.೫೦ ಲಕ್ಷ ರೂ.ನಗದು ಪತ್ತೆಯಾಗಿದೆ.
ನಗದು ವಶಪಡಿಸಿಕೊಂಡು ಹಣ ಸಾಗಿಸುತ್ತಿದ್ದ ಮೂವರನ್ನು ವಿಚಾರ ಣೆಗೊಳಪಡಿಸಲಾಗಿದೆ. ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ೧೫೦ ಕ್ವಿಂ ಟಾಲ್ ಅಕ್ಕಿಯನ್ನು ತರೀಕೆರೆ ತಾಲ್ಲೂ ಕು ಎಂಸಿ ಕ್ಯಾಂಪ್ ಚೆಕ್ಪೋಸ್ಟ್ನಲ್ಲಿ ಪೊಲೀಸರು ಟೆಂಪೋ ಸಮೇತ ವಶಕ್ಕೆ ಪಡೆದಿದ್ದಾರೆ.
ಈ ಅಕ್ಕಿಯನ್ನು ಮತದಾರರಿಗೆ ಹಂಚಲು ತರಲಾಗಿತ್ತು ಎಂದು ತಿಳಿ ದುಬಂದಿದ್ದು, ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.