News Kannada
Thursday, June 01 2023
ಚಿಕಮಗಳೂರು

ಚಿಕ್ಕಮಗಳೂರು: 5 ವರ್ಷದಲ್ಲಿ 15.96ಕೋಟಿ ರೂ ಅನುದಾನ ಮಂಜೂರು

Rs 15.96 crore sanctioned in 5 years
Photo Credit : News Kannada

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಜೋಡಿಹೋಚಿಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಕಳೆದ ಐದು ವರ್ಷಗಳಲ್ಲಿ 15.96 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ ಎಂದು ಶಾಸಕ ಸಿ.ಟಿ. ರವಿ ಅವರು ಹೇಳಿದ್ದಾರೆ.

ಇತ್ತೀಚೆಗೆ ಜೋಡಿಹೋಚಿಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಡೇರಹಳ್ಳಿ ತಾಂಡ್ಯದಲ್ಲಿ ನಡೆದ ಕಂದಾಯ ಗ್ರಾಮ ಘೋಷಣೆ ಹಾಗೂ ಹಕ್ಕಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜೋಡಿಹೋಚಿಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೂರುವರೆ ಕೋಟಿ ರುಪಾಯಿ ಅನುದಾನ ನೀಡಿದ್ದೇನೆಂದು ಹೇಳಿದರು. ಇತ್ತೀಚೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಲುಬರ್ಗಿಯಲ್ಲಿ ಲಂಬಾಣಿ ತಾಂಡ್ಯ ಹಾಗೂ ಗೊಲ್ಲರಹಟ್ಟಿಗಳಿಗೆ ಸಂಬಂಽಸಿದಂತೆ ೧೫೭೫ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಘೋಷಣೆ ಮಾಡಿ, ೬೦ ಸಾವಿರಕ್ಕೂ ಹೆಚ್ಚು ಜನರಿಗೆ ಹಕ್ಕುಪತ್ರವನ್ನು ವಿತರಿಸಿದರು.

ಆ ಕಾರ್ಯಕ್ರಮದ ಮುಂದುವರೆದ ಭಾಗವಾಗಿ, ನಾವು ಈ ನಮ್ಮ ಕ್ಷೇತ್ರದಲ್ಲಿರುವಂತಹ ತಾಂಡ್ಯ ಹಾಗೂ ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ, ಹಕ್ಕುಪತ್ರ ನೀಡುತ್ತಿದ್ದೇವೆಂದ ಅವರು, ವಡೇರಹಳ್ಳಿ ತಾಂಡ್ಯದ ೧೨೦ ಹಾಗೂ ಜೋಡಿಹೋಚಿಹಳ್ಳಿ ಗೊಲ್ಲರಹಟ್ಟಿಯಲ್ಲಿ ೩೦ಕ್ಕೂ ಹೆಚ್ಚು ಹಕ್ಕುಪತ್ರ ನೀಡಲಾಗುತ್ತಿದೆ ಎಂದರು.

ಜೋಡಿಹೋಚಿಹಳ್ಳಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷೆ ವಿದ್ಯಾಸರಸ್ವತಿ ಮಹೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ನಾಗೇಶ್, ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ವಿಜಯಕುಮಾರ್, ಸಾಹಿತಿ ಚಟ್ನಳ್ಳಿ ಮಹೇಶ್, ಕಡೂರು ಎಪಿಎಂಸಿ ಮಾಜಿ ಅಧ್ಯಕ್ಷ ಚಿಕ್ಕದೇವನೂರು ರವಿ, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ. ಕಲ್ಮರಡಪ್ಪ, ಲಕ್ಷ್ಮಣ್‌ನಾಯಕ್, ರವಿಕುಮಾರ್, ತ್ರಿಮೂರ್ತಿ, ಸಂತೋಷ್, ಯಶೋಧಮ್ಮ, ಗ್ರಾಮಸ್ಥರಾದ ಬಿಜ್ಜು ದೇವರಾಜ ನಾಯ್ಕ, ಪ್ರಕಾಶ್ ನಾಯ್ಕ, ಕುಮಾರನಾಯ್ಕ, ಶಂಕರನಾಯ್ಕ, ಸತೀಶ್ ನಾಯ್ಕ, ತೀರ್ಥನಾಯ್ಕ, ಮೂರ್ತಿನಾಯ್ಕ, ವಸಂತನಾಯ್ಕ, ಲಂಬಾಣಿ ಸಮಾಜದ ಮುಖಂಡರು ಹಾಗೂ ಕಂದಾಯ ನಿರೀಕ್ಷಕ ಜಿತೇಂದ್ರ ನಾಯ್ಕ, ಪಿಡಿಓ ಆದಿನಾಥ್ ಬಿಳಗಿ ಉಪಸ್ಥಿತರಿದ್ದರು. ರೂಪಾ ವೆಂಕಟೇಶ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

See also  ಆಸ್ಟ್ರೇಲಿಯ ಪ್ರಧಾನಿ ಜತೆ ಟೆಸ್ಟ್‌ ಪಂದ್ಯ ವೀಕ್ಷಿಸಿದ ಮೋದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು