News Karnataka Kannada
Friday, March 29 2024
Cricket
ಚಿಕಮಗಳೂರು

ಚಿಕ್ಕಮಗಳೂರು: ಆಪರೇಷನ್ ಥಿಯೇಟರ್‌ನಲ್ಲಿ ಟೈಟಾಗಿ ಮಲಗಿದ್ದ ವೈದ್ಯ

Chikkamagaluru: Doctor sleeps tightly in operation theatre
Photo Credit : News Kannada

ಚಿಕ್ಕಮಗಳೂರು: ಕುಡಿದು ಬಂದು ಆಪರೇಷನ್ ಥಿಯೇಟರ್‌ನಲ್ಲಿ ಮಲಗಿದ್ದ ವೈದ್ಯನನ್ನು ಬಚಾವ್ ಮಾಡಿಸುವ ಸಲುವಾಗಿ ಸಿಬ್ಬಂದಿ ವಿಷ್ಣುಸೇನಾ ಚಿತ್ರದ ಪಾರ್ಟ್ ೨ ಕಥೆ ಹೆಣೆದ ಘಟನೆ ಚಿಕ್ಕಮಗಳೂರಿನ ಕಳಸ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ಸಂತಾನಹರಣ ಕ್ಯಾಂಪ್ ಏರ್ಪಾಡು ಮಾಡಿದ್ದು, ಮಹಿಳೆಯರಿಗೆ ಬರಲು ಹೇಳಿದ್ದರು. ಕ್ಯಾಂಪ್‌ಗೆ ೧೦ಕ್ಕೂ ಹೆಚ್ಚು ಮಹಿಳೆಯರು ತಮ್ಮ ಮಕ್ಕಳನ್ನು ಬಿಟ್ಟು ಬಂದಿದ್ದರು.

ಆಪರೇಷನ್ ಮಾಡುವ ಸಲುವಾಗಿ ಕೊಪ್ಪ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ೩ ಗಂಟೆಗೆ ಬಂದಿದ್ದ. ಬರುತ್ತಲೇ ಫುಲ್ ಟೈಟ್ ಆಗಿದ್ದ ಈತ ಸಂತಾನಹರಣ ಚಿಕಿತ್ಸೆ ಮಾಡಬೇಕಾದ ಆಪರೇಷನ್ ಬೆಡ್ ಮೇಲೆ ಮಲಗಿ ದ್ದಾನೆ. ಇದರಿಂದಾಗಿ ಅನಸ್ತೇಷಿಯಾ ತೆಗೆದುಕೊಂಡು ಮಲಗಿದ್ದ ಮಹಿಳೆಯರು ರೆಬಲ್ ಆಗಿದ್ದಾರೆ.

ಈ ವೇಳೆ ಸಿಬ್ಬಂದಿ ವೈದ್ಯರಿಗೆ ಏನೋ ಆಗಿದೆ. ಶುಗರ್ ಕಡಿಮೆ ಆಗಿದೆ, ಬಿಪಿ ಜಾಸ್ತಿ ಆಗಿದೆ ಎಂದು ವಿಷ್ಣುಸೇನಾ ಚಿತ್ರದ ಪಾರ್ಟ್ ೨ ಸನ್ನಿವೇಶ ಸೃಷ್ಟಿಸಿ ಹೈಡ್ರಾಮಾ ಮಾಡಿದ್ದಾನೆ. ಅಲ್ಲದೇ ವೈದ್ಯರಿಗೆ ಗ್ಲೂಕೋಸ್ ಹಾಕಿಸಿ ವಾಪಸ್ ಕೊಪ್ಪಕ್ಕೆ ಕಳುಹಿಸಲಾಗಿದೆ. ಅನಸ್ತೇಷಿಯಾ ತೆಗೆದುಕೊಂಡು ಮಲಗಿದ್ದ ಮಹಿಳೆಯರಿಗೆ ಆಸ್ಪತ್ರೆ ಸಿಬ್ಬಂದಿ ಗ್ಲೂಕೋಸ್ ಹಾಕಿದ್ದಾರೆ. ಗುರುವಾರ ಮತ್ತೆ ಬೇರೆ ವೈದ್ಯರನ್ನು ಕರೆಸಿ ಆಪರೇಷನ್ ಮಾಡಿಸಲು ಸಿದ್ಧತೆ ನಡೆಸಲಾಗಿದೆ.

ಸಿಬ್ಬಂದಿಗಳ ಈ ವರ್ತನೆಗೆ ಆಸ್ಪತ್ರೆಗೆ ಆಗಮಿಸಿದ್ದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಹಿಡಿ ಶಾಫ ಹಾಕಿದ್ದಾರೆ.
ಸುದ್ದಿ ತಿಳಿದ ಬಳಿಕ ಡಿ.ಹೆಚ್.ಓ ಉಮೇಶ್ ಅವರು ಈ ಕುರಿತು ಪರಿಶೀಲನೆ ನಡೆಸುವ ಭರವಸೆ ನೀಡಿದ್ದಾರೆ. ವೈದ್ಯನ ಅಮಾನತಿಗೆ ಸಚಿವ ದಿನೇಶ್ ಗುಂಡೂರಾವ್ ಆದೇಶ ನೀಡಿದ್ದು ತಪ್ಪಿತಸ್ಥರ ವಿರುದ್ಧ ವಿಚಾರಣೆಗೆ ಆದೇಶ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು