News Karnataka Kannada
Friday, April 26 2024
ಚಿಕಮಗಳೂರು

ಚಿಕ್ಕಮಗಳೂರು: ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹೆಚ್.ಡಿ.ತಮ್ಮಯ್ಯ ಭೇಟಿ

MLA HD Thammaiah visits rain-affected areas
Photo Credit : News Kannada

ಚಿಕ್ಕಮಗಳೂರು: ನಗರ ಸೇರಿದಂತೆ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹೆಚ್.ಡಿ.ತಮ್ಮಯ್ಯ ಭೇಟಿ ನೀಡಿ ನೊಂದವರಿಗೆ ಸಾಂತ್ವನ ಹೇಳಿದರು.

ಸಖರಾಯಪಟ್ಟಣದಲ್ಲಿ ಕಳೆದ ರಾತ್ರಿ ಭಾರೀ ಮಳೆ ಸುರಿದಿತ್ತು. ಆಲಿಕಲ್ಲು ಮಳೆಗೆ ಮನೆಯ ಮೇಲ್ಛಾ ವಣಿಯ ಶೀಟ್‌ಗಳು ಹಾರಿ ಹೋಗಿ ದ್ದವು.
ಆಗಲೇರಿ ಗ್ರಾಮದ ಮಂಗಳಮ್ಮ, ರತ್ನಮ್ಮ, ರಂಗಣ್ಣ ಎಂಬುವರ ಮನೆಗೆ ಹಾನಿಯಾಗಿತ್ತು. ಮಳೆಯಿಂದ ಹಾನಿಯಾದ ಕುಟುಂಬಕ್ಕೆ ಗ್ರಾಮ ಸ್ಥರು ಸಹಾಯ ಮಾಡಿದರು.

ಮನೆಯಲ್ಲಿದ್ದ ಆಹಾರ ಸಾಮಗ್ರಿ ಹಾಗೂ ಪೀಠೋಪಕರಣಗಳಿಗೂ ಹಾನಿಯಾಗಿತ್ತು. ಸೂಕ್ತ ಪರಿಹಾರ ನೀಡುವಂತೆ ತಹಶೀಲ್ದಾರ್ ಹಾಗೂ ರೆವೆನ್ಯೂ ಇನ್ಸ್ಪೆಕ್ಟರ್‌ಗೆ ಸೂಚನೆ ನೀಡಿ ಮನೆಗಳಿಗೆ ತುರ್ತಾಗಿ ಟಾರ್ಪಲ್ ವ್ಯವಸ್ಥೆ ಮಾಡಲು ಪಿಡಿಓಗೆ ಆದೇಶಿಸಿದರು.

ಈ ನಡುವೆ ಇಂದು ಚಿಕ್ಕಮ ಗಳೂರು ನಗರದಲ್ಲಿ ಧಾರಾಕಾರ ಮಳೆ ಸುರಿದಿದ್ದು ನಗರ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದ್ದು ಅರ್ಧ ಗಂಟೆಯಿಂದ ಸುರಿದ ಭಾರೀ ಮಳೆ ಯಿಂದರಸ್ತೆಯಲ್ಲಿ ನದಿಯಂತೆ ನೀರು ಹರಿಯುತ್ತಿತ್ತು. ಮನೆಗಳಿಗೆ ವಾಪಸ್ ಹೋಗಲಾಗದೆ ಜನ ಪರದಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು