News Karnataka Kannada
Wednesday, April 24 2024
Cricket
ಚಿಕಮಗಳೂರು

ಚಿಕ್ಕಮಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ – ದೇಶದ ರಾಜಕೀಯ ದಿಕ್ಸೂಚಿ

ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ನಾಲ್ಕನೇ ಪಟ್ಟಿ ಘೋಷಣೆಯಾಗಿದೆ. ಒಟ್ಟು 46 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ.
Photo Credit : News Kannada

ಚಿಕ್ಕಮಗಳೂರು: ಕರ್ನಾಟಕ ವಿಧಾನಸಭೆಗೆ ಮೇ.೧೦ ರಂದು ನಡೆದ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ದೇಶದ ರಾಜಕೀಯಕ್ಕೆ ದಿಕ್ಸೂಚಿಯಾಗಿದೆ ಎಂದು ಮಾಜಿ ಸಚಿವ ಬಿ.ಬಿ ನಿಂಗಯ್ಯ ಅಭಿಪ್ರಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತ ಪೂರ್ವ ಗೆಲುವು ಸಿಕ್ಕಿದೆ, ನಿಶ್ಚಳ ಬಹುಮತ ಬರುವಂತೆ ಸ್ಥಿರ ಸರಕಾರ ರಚನೆಗೆ ಅನುಕೂಲವಾಗುವಂತೆ ತೀರ್ಪು ನೀಡಿರುವ ರಾಜ್ಯದ ಎಲ್ಲ ಮತದಾ ರರಿಗೆ ಅಭಿನಂದಿಸುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿಯೂ ೫ ವಿಧಾ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಳು ಜಯಗಳಿಸಿದ್ದು, ಕಾಂ ಗ್ರೆಸ್ ಪಕ್ಷದ ಪರವಾಗಿ ಮತ ಹಾಕಿದ ಎಲ್ಲ ಮತ ದಾರರಿಗೆ, ಈ ಗೆಲುವಿಗಾಗಿ ಶ್ರಮಿಸಿದ ಪಕ್ಷದ ರಾಷ್ಟ್ರ, ರಾಜ್ಯ ಮತ್ತು ಜಿಲ್ಲೆಯ ಮುಖಂಡರು, ಕಾರ್ಯ ಕರ್ತರು ಹಾಗೂ ಪ್ರತ್ಯಕ್ಷ, ಪರೋಕ್ಷವಾಗಿ ಬೆಂಬಲಿಸಿ ಸಹಕರಿಸಿದ ಎಲ್ಲರಿಗೂ ಅಭಿನಂದಿಸುತ್ತೇನೆ ಎಂದರು.

ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಧರ್ಮಾಧಾರಿತ ರಾಜಕಾರಣ ಮಾಡಿದ ಪರಿಣಾಮ ದೇಶದಲ್ಲಿ ಅಶಾಂತಿ ವಾತಾವರಣ ಸೃಷ್ಟಿಯಾ ಯಿತು. ಬೆಲೆ ಏರಿಕೆ, ಭ್ರಷ್ಠಾಚಾರ, ಜನ ವಿರೋಧಿ ನೀತಿಯಿಂದ ಆಡಳಿತ ವಿರೋಧಿ ಅಲೆ ಎದ್ದಿದ್ದು, ಈ ಜನ ವಿರೋಧಿ ಸರಕಾರದ ವಿರುದ್ದ ಕಾಂಗ್ರೆಸ್ ಪಕ್ಷ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದ ರಿಂದ ಈ ಚುನಾವಣೆಯಲ್ಲಿ ಗೆಲುವು ತಂದುಕೊಟ್ಟಿರುವುದು ಕಾಂಗ್ರೆಸ್‌ನ ಹೋರಾಟಕ್ಕೆ ಸಂದ ಜಯ ಎಂದರು.

ಚುನಾವಣೆಯಲ್ಲಿ ಜನ ವಿರೋಧಿ ಅಲೆಯ ಜತೆಗೆ ಕಾಂಗ್ರೆಸ್ ಪಕ್ಷದ ೫ ಗ್ಯಾರಂಟಿ ಯೋಜನೆಗಳು ಪಕ್ಷದ ಗೆಲುವಿಗೆ ಕೈ ಹಿಡಿದಿದ್ದು, ಒಟ್ಟಾರೆಯಾಗಿ ಜನರು ಬಿಜೆಪಿಯ ದುರಾಡಳಿತವನ್ನು ತಿರಸ್ಕರಿಸಿರುವುದರಿಂದ ಈ ಚುನಾವಣೆಯ ಫಲಿತಾಂಶ ದೇಶದ ರಾಜಕೀಯಕ್ಕೆ ದಿಕ್ಸೂ ಚಿಯಾಗಿದೆ ಎಂದು ಅಭಿಪ್ರಾಯ ಪಟ್ಟರು. ತಾವು ಕಾಂಗ್ರೆಸ್ ಪಕ್ಷ ಸೇರಿದ ಹಿನ್ನೆಲೆಯಲ್ಲಿ ತಮ್ಮಿಂದ ಸೋಲಿನ ಕೊರತೆಯನ್ನು ತುಂಬುವಷ್ಟು ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದು, ಈ ಬಾರಿಯ ಗೆಲುವಿನಲ್ಲಿ ತಮ್ಮದು ಪ್ರಮುಖ ಪಾತ್ರವಿದೆ ಎಂದು ಹೇಳಿದರು.

ಮೂಡಿಗೆರೆ ಮತದಾರರು ಪ್ರಭುದ್ದ ಮತದಾನ ಮಾಡುವ ಮೂಲಕ ಯುವ ಉತ್ಸಾಹಿ ರಾಜಕಾರಣಿಯಾಗಿರುವ ನಯನಾಮೋಟಮ್ಮ ಅವರನ್ನು ಗೆಲ್ಲಿಸಿದ್ದಾರೆ ಅವರಿಗೆ ತಮ್ಮೆಲ್ಲಾ ಸಲಹೆ ಸಹಕಾರ ನೀಡುವ ಮೂಲಕ ಮೂಡಿಗೆರೆ ಕ್ಷೇತ್ರದ ಅಭಿವೃದ್ಧಿ ಜತೆಗೆ ಈ ಭಾಗದ ಸಮಸ್ಯೆಗಳ ನಿವಾರಣೆಗೆ ಪ್ರಯತ್ನಿಸುವುದಾಗಿ ಹೇಳಿದರು.

ಇನ್ನಾದರೂ ಬಿಜೆಪಿಯವರು ಧರ್ಮಾಧಾರಿತ ರಾಜಕಾರಣ ಮಾಡಿ ಜನರ ಮನಸ್ಸನ್ನು ಒಡೆಯುವ ಬದಲು ಜನಪರವಾಗಿ ಕೆಲಸ ಮಾಡಿ ಒಳ್ಳೆಯ ವಿರೋಧ ಪಕ್ಷವಾಗಿ ಕೆಲಸ ಮಾಡಲಿ ಎಂದು ಸಲಹೆ ನೀಡಿದರು. ಕಾಂಗ್ರೆಸ್ ಮುಖಂಡರಾದ ಲಕ್ಷ್ಮಣ್, ಜಗದೀಶಾ ಚಾರ್, ಸತೀಶ್, ಪುಟ್ಟಸ್ವಾಮಿ ಮತ್ತಿತರರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು