News Karnataka Kannada
Thursday, April 25 2024
Cricket
ಬೆಂಗಳೂರು ನಗರ

ಚಿಕ್ಕಮಗಳೂರಿಗೆ ಹೈ ಅಲರ್ಟ್‌: 77 ಹಳ್ಳಿಗಳು ಅಪಾಯಕಾರಿ ವಲಯದಲ್ಲಿ

High alert for Chikmagalur: 77 villages in danger zone
Photo Credit : IANS

ಬೆಂಗಳೂರು: ಕಳೆದ ಹಲವು ವರ್ಷಗಳಿಂದ ಕರ್ನಾಟಕದ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳು ಮಳೆಗಾಲದಲ್ಲಿ ಭೂಕುಸಿತ, ವಿಪರೀತ ಮಳೆಯಿಂದ ತತ್ತರಿ, ಸಂಪರ್ಕ ಕಡಿತಗೊಂಡು, ಅಪಾರ ಜೀವ ಹಾನಿಯಾಗಿತ್ತು. ಇದೀಗ ಮತ್ತೆ ಮಳೆಗಾಲ ಕೆಲದಿನಗಳು ಬಾಕಿಯಿದೆ. ಆದರೆ ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಬೆಚ್ಚಿಬೀಳಿಸುವಂತಿದೆ.

ಹವಾಮಾನ ಇಲಾಖೆಯು ಚಿಕ್ಕಮಗಳೂರು ಜಿಲ್ಲೆಗೆ ಹೈ ಅಲರ್ಟ್ ಘೋಷಿದ್ದು, ಚಿಕ್ಕಮಗಳೂರಿನಲ್ಲಿ 47 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 77 ಹಳ್ಳಿಗಳನ್ನು “ಅಪಾಯಕಾರಿ ವಲಯ” ಎಂದು ಗುರುತಿಸಲಾಗಿದೆ. ಕಳೆದ ವರ್ಷ ಈ ಸ್ಥಳಗಳಲ್ಲಿ ಭಾರೀ ನಷ್ಟ ಅನುಭವಿಸಿದ್ದರಿಂದ ಮುನ್ನೆಚ್ಚರಿಕೆ ವಹಿಸಲು ಇಡೀ ಜಿಲ್ಲೆಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.

ಭೂಕುಸಿತ ಮತ್ತು ಪ್ರವಾಹದಿಂದಾಗಿ ಕೊಡಗು ಜಿಲ್ಲೆ ಐದು ವರ್ಷಗಳಿಂದ ರಾಜ್ಯದಲ್ಲಿ ಹೆಚ್ಚು ಹಾನಿಗೊಳಗಾಗಿದೆ. ಮಡಿಕೇರಿ ತಾಲ್ಲೂಕಿನಿಂದ 768 ಕುಟುಂಬಗಳ 2,681 ಜನರನ್ನು ಸ್ಥಳಾಂತರಿಸುವ ಕುರಿತು ಜಿಲ್ಲಾಡಳಿತ ಈಗಾಗಲೇ ಸರ್ಕಾರಕ್ಕೆ ವರದಿ ಕಳುಹಿಸಿದೆ. ತುರ್ತು ಪರಿಸ್ಥಿತಿಗಳಿಗೆ ಹಾಜರಾಗಲು 26 ಶಿಬಿರಗಳನ್ನು ಸ್ಥಾಪಿಸಲು ಆಡಳಿತವು ನಿರ್ಧರಿಸಿದೆ.

ಸೋಮವಾರಪೇಟೆ ತಾಲೂಕಿನಲ್ಲಿ 1,143 ಕುಟುಂಬಗಳಿಂದ 4,162 ಜನರನ್ನು ಸ್ಥಳಾಂತರಿಸಬೇಕು. 30 ಪುನರ್ವಸತಿ ಶಿಬಿರಗಳನ್ನು ಸ್ಥಾಪಿಸಬೇಕು ಎಂದು ವರದಿ ಶಿಫಾರಸು ಮಾಡಿದೆ. ಅದೇ ರೀತಿ ವಿರಾಜಪೇಟೆ ತಾಲೂಕಿನಲ್ಲಿ 582 ಕುಟುಂಬಗಳ 2,049 ಜನರನ್ನು ಸ್ಥಳಾಂತರಿಸಬೇಕಾಗಿದ್ದು, 26 ಶಿಬಿರಗಳನ್ನು ತೆರೆಯಬೇಕು ಎಂದು ಸೂಚಿಸಿದೆ.

ಈ ಪ್ರದೇಶವು ಕಳೆದ ವರ್ಷ ವಿನಾಶವನ್ನು ಎದುರಿಸಿತು. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್) ಕೊಡಗು ಜಿಲ್ಲೆಗೆ ಆಗಮಿಸುತ್ತಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಿಂದಾಗಿ (ಏಪ್ರಿಲ್‌ನಿಂದ ಜೂನ್‌ವರೆಗೆ) ಆಸ್ತಿಪಾಸ್ತಿ ಹಾನಿಯೊಂದಿಗೆ 52 ಸಾವುಗಳು ವರದಿಯಾಗಿವೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಹೇಳಿಕೆ ನೀಡಿದ್ದು, ತಕ್ಷಣ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 20,000 ಹೆಕ್ಟೇರ್‌ನಲ್ಲಿ ಬೆಳೆ ನಷ್ಟ ಹಾಗೂ 814 ಮನೆಗಳಿಗೆ ಹಾನಿಯಾಗಿದ್ದು, ಒಟ್ಟು 331 ಜಾನುವಾರು ನಷ್ಟವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು