News Kannada
Friday, June 09 2023
ಚಿಕಮಗಳೂರು

ಚಿಕ್ಕಮಗಳೂರಿನಲ್ಲಿ ಕೈ ಕಮಾಲ್‌ 5 ಕ್ಷೇತ್ರಗಳು ಕೈ ತೆಕ್ಕೆಗೆ

Photo Credit :

 

ಚಿಕ್ಕಮಗಳೂರು: ಇಂದಿರಾ ಗಾಂಧಿಗೆ ರಾಜಕೀಯ ಪುನರುಜ್ಜೀವನ ನೀಡಿದ ಚಿಕ್ಕಮಗಳೂರಿನಲ್ಲಿ ಮತ್ತೊಮ್ಮೆ ಇತಿಹಾಸ ಸೃಷ್ಟಿಯಾಗಿದೆ. ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ಐದರಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಎಚ್.ಡಿ.ತಮ್ಮಯ್ಯ ಸೋಲಿನ ಶಾಕ್ ನೀಡಿದ್ದಾರೆ.

ಕಡೂರಿನಲ್ಲಿ ಶಾಸಕರಾಗಿದ್ದ ಬೆಳ್ಳಿ ಪ್ರಕಾಶ್ (59119) ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಆನಂದ್. ಕೆ.ಎಸ್ ಅವರು ಭರ್ಜರಿ ಜಯ ಸಾಧಿಸಿದ್ದಾರೆ.(70386 ಮತ) ಕಾಂಗ್ರೆಸ್ ಸೇರಿ ಟಿಕೆಟ್ ಸಿಗದೇ ಮತ್ತೆ ಜೆಡಿಎಸ್ ಗೆ ಮರಳಿದ್ದ ವೈ. ಎಸ್. ವಿ ದತ್ತಾ ಅವರು(25551) ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

ಶೃಂಗೇರಿಯಲ್ಲಿ ಜಿದ್ದಾ ಜಿದ್ದಿನ ಸ್ಪರ್ಧೆಯಲ್ಲಿ 153 ಮತಗಳ ಅಂತರರದಿಂದ ಡಿ.ಎನ್.ಜೀವರಾಜ್ ಅವರ ವಿರುದ್ಧ ಕಾಂಗ್ರೆಸ್ ನ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ.

ಮೂಡಿಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಯನಾ ಮೋಟಮ್ಮ(37796) ಅವರು ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ (35934) ವಿರುದ್ಧ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಸೇರಿದ್ದ ಎಂ.ಪಿ. ಕುಮಾರಸ್ವಾಮಿ 19390 ಮತಗಳನ್ನು ಪಡೆದಿದ್ದಾರೆ.

ತರೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಚ್. ಶ್ರೀನಿವಾಸ (62413) ಅವರು ಬಿಜೆಪಿಯ ಡಿ.ಎಸ್.ಸುರೇಶ್(50385) ವಿರುದ್ಧ ಗೆಲುವು ಸಾಧಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ(ಕಾಂಗ್ರೆಸ್ ಬಂಡಾಯ) ಎಚ್.ಎಂ. ಗೋಪಿಕೃಷ್ಣ ಹುಣಸಗಟ್ಟ ಅವರು 35266 ಮತಗಳನ್ನು ಪಡೆದು ತ್ರಿಕೋನ ಸ್ಪರ್ಧೆಯನ್ನು ನೀಡಿದರು.

See also  ಕೊಡಗಿನಲ್ಲಿ ಜ.6 ರಂದು ನಡೆಯಲಿದೆ ಮೆಂಬರ್ ಶಿಪ್ ಡೇ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು