ಚಿಕ್ಕಮಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ವಿಜೃಂಭಣೆಯಿಂದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ರಾಜಕೀಯ ಜೀವನ ಬಹಳ ಉತ್ತಮವಾಗಿ ಸಾಗಲಿ. ಅವರ ಆದರ್ಶ ಮೌಲ್ಯಗಳನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಳವಡಿಸಿಕೊಳ್ಳಬೇಕೆಂದು ಹೇಳಿದರು.
ರಾಜ್ಯದಲ್ಲಿ ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಬಹಳ ಶ್ರಮಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಾಗಬೇಕಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಕ್ತಾರ ರೂಬೆನ್ ಮೊಸಸ್, ಜಿಲ್ಲಾ ಕಾರ್ಯದರ್ಶಿಗಳಾದ ಬಿ.ಎಂ.ಸಂದೇಶ್, ಹಿರೇಮಗಳೂರು ರಾಮಚಂದ್ರ, ನಗರಸಭಾ ಸದಸ್ಯ ಪರಮೇಶ್ ರಾಜ್ ಅರಸ್, ಮುಖಂಡರಾದ ಮಹಮದ್ ಅಕ್ಬರ್, ಸುರೇಶ್ ಕುಮಾರ್, ರಾಮಣ್ಣ, ಜೇಮ್ಸ್ ಡಿಸೋಜಾ, ಯಶೋಧ, ಉಪ್ಪಳ್ಳಿ ಅನ್ಸರ್, ಹೆಚ್,ಎಸ್.ಜಗದೀಶ್, ರಾಜಶೇಖರ್, ಸುರೇಖಾ ಸಂಪತ್ ರಾಜ್ ಸೇರಿದಂತೆ ಪಕ್ಷದ ಮುಖಂಡರು ಹಾಜರಿದ್ದರು.