ಮೂಡಿಗೆರೆ: ಪ್ರಸಿದ್ಧ ಪ್ರವಾಸಿ ತಾಣವಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ದೇವರ ಮನೆ ಗುಡ್ಡದ ವ್ಯಾಪ್ತಿಯಲ್ಲಿ ಯುವಕನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಚಾರಣಕ್ಕೆ ಹೆಸರು ವಾಸಿಯಾಗಿರುವ ಸ್ಥಳವಾದ ದೇವರು ಮನೆ ಗುಡ್ಡದ ಸಮೀಪದ ರಸ್ತೆ, ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು ಗುರುತು ಸಿಗದ ಸ್ಥಿತಿಯಲ್ಲಿ ಶವ ದೊರಕಿದೆ.
ಯುವಕರನ್ನು ಕೊಲೆ ಮಾಡಿ ಈ ಸ್ಥಳಕ್ಕೆ ತಂದು ಎಸೆದಿರುವ ಶಂಕೆ ವ್ಯಕ್ತವಾಗಿದ್ದು ಶವವನ್ನು ನೋಡಿದ ಪ್ರವಾಸಿಗರು ಪೊಲೀಸರಿಗೆ ಈ ಸಂಬಂಧ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಆರಂಭಿಸಿದ್ದಾರೆ. ದಟ್ಟವಾದ ಅರಣ್ಯ ಪ್ರದೇಶವನ್ನು ಹೊಂದಿರುವ ಚಾರ್ಮಾಡಿ ಘಾಟ್ ನ ಸುತ್ತಮುತ್ತಲಿನ ನಿರ್ಜನ ಪ್ರದೇಶಗಳಲ್ಲಿ ಈ ಹಿಂದೆಯೂ ಹಲವಾರು ವ್ಯಕ್ತಿಗಳ ಮೃತದೇಹಗಳು ಪತ್ತೆಯಾಗಿದ್ದವು. ಘಟನಾ ಸಂಬಂಧ ಪರಿಶೀಲನೆ ಆರಂಭಿಸಿರುವ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಕಲೆಹಾಕಲು ಆರಂಭಿಸಿದ್ದಾರೆ.