News Karnataka Kannada
Saturday, April 27 2024
ಚಿಕಮಗಳೂರು

ಜನಪರ ಹೋರಾಟದ ರಾಜಕೀಯಕ್ಕೆ ಸೋಲಾಗಿದೆ: ಬಿ.ಕೆ.ಲಕ್ಷ್ಮಣ್‌ಕುಮಾರ್

The politics of pro-people struggle has been defeated: BK Laxman Kumar
Photo Credit : News Kannada

ಮೂಡಿಗೆರೆ: ಕಲುಷಿತ ಗೊಂಡಿರುವ ರಾಜಕೀಯ ವ್ಯವಸ್ಥೆಯಲ್ಲಿ ಮೂಡಿಗೆರೆ ಕ್ಷೇತ್ರದಲ್ಲಿ ಶೇ.೭೦ ರಷ್ಟು ಮತದಾರರು ಮಾರಾಟವಾಗಿದ್ದರಿಂದ ಪ್ರಾಮಾಣಿಕ, ಜನಪರ ಹೋರಾಟದ ರಾಜಕೀಯಕ್ಕೆ ಸೋಲಾಗಿದೆ ಎಂದು ಸಿಪಿಐ ಮುಖಂಡ ಬಿ.ಕೆ.ಲಕ್ಷ್ಮಣ್ ಕುಮಾರ್ ಹೇಳಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಜನರಿಗೆ ಅವಶ್ಯಕತೆ ಎನಿಸಿತ್ತು. ಅಲ್ಲದೇ ಬಿಜೆಪಿಯ ಭ್ರಷ್ಟಾಚಾರ ಹಾಗೂ ದುರಾಡಳಿತದಿಂದ ಬೇಸತ್ತಿದ್ದ ರಾಜ್ಯದ ಜನತೆ ಪ್ರಧಾನಿ ಮೋದಿ ಅವರಂತಹ ನಾಯಕರು ರಾಜ್ಯಕ್ಕೆ ಭೇಟಿ ನೀಡಿದ್ದರೂ ಕ್ಯಾರೆ ಎನ್ನದೇ ಬಿಜೆಪಿಯನ್ನು ತಿರಸ್ಕಾರ ಮಾಡಿದ್ದಾರೆ.

ಇದು ಜಾತ್ಯಾತೀತ ನಿಲುವಿಗೆ ಹಿಡಿದ ಕೈಗನ್ನಡಿಯಾಗಿದೆ. ರಾಜ್ಯದಲ್ಲಿ ಈಗ ಗ್ಯಾರಂಟಿ ಯೋಜನೆ ಬಗ್ಗೆ ಮಾತ್ರ ಚರ್ಚೆಯಾಗುತ್ತಿದೆ. ಇದೇ ರೀತಿಯಲ್ಲಿ ಕೇಂದ್ರ ಸರಕಾರ ಈಗಾಗಲೇ ಜಾರಿ ಮಾಡಿರುವ ಕಿಸಾನ್ ಸಮ್ಮಾನ್, ಕಾಫಿ ತೋಟಗಳಿಗೆ ಪ್ರಕೃತಿ ವಿಕೋಪ ನಿರ್ವ ಹಣೆ ಅಡಿಯಲ್ಲಿ ಬರುವ ಅನುದಾನ ಬಗ್ಗೆ  ಚರ್ಚೆ ನಡೆಸಬೇಕಾಗಿದೆ ಎಂದು ಹೇಳಿದರು.

ಮೂಡಿಗೆರೆ ಕ್ಷೇತ್ರ ಹೊರತುಪಡಿಸಿ ರಾಜ್ಯದಲ್ಲಿ ೨೧೫ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಸಿಪಿಐ ಪಕ್ಷ ಬೆಂಬಲ ಸೂಚಿಸಲಾಗಿತ್ತು. ಈ ಬಗ್ಗೆ ಮೂಡಿಗೆರೆ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರದ ವೇಳೆ ಮತದಾರರಲ್ಲಿ ಅರಿವು ಮೂಡಿಸುವಲ್ಲಿ ವಿಫಲರಾಗಿದ್ದರಿಂದ ಪಕ್ಷದ ಅಭ್ಯರ್ಥಿ ಕಡಿಮೆ ಮತ ಪಡೆಯಲು ಕಾರಣವಾಗಿದೆ. ಈ ಬಗ್ಗೆ ಪಕ್ಷದಲ್ಲಿ ಆತ್ಮಾವಲೋಕನ ಮಾಡಿಕೊ ಳ್ಳಲಾಗಿದ್ದು, ಇಂತಹ ನ್ಯೂನ್ಯತೆ ಮುಂ ದೆಂದೂ ಬಾರದಂತೆ ಎಚ್ಚರ ವಹಿಸಲಾಗಿದೆ. ಮುಂಬರುವ ಎಲ್ಲಾ ಚುನಾವಣೆ ಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶಕ್ತಿ ಮೀರಿ ಪ್ರಯತ್ನಿಸಲಾಗು ವುದು ಎಂದ ಅವರು, ರಾಜ್ಯ ಸರಕಾರ ೫ ಗ್ಯಾರಂಟಿಯನ್ನು ಈಡೇರಿಸಬೇಕೆಂದು ಒತ್ತಾಯಿಸಿದರು. ಸಿಪಿಐ ಮುಖಂಡರಾದ ಗೋಪಾಲ್ ಎನ್‌ಶೆಟ್ಟಿ, ರಮೇಶ್ ಕೆಳಗೂರು, ಸುಂದರ್ ಸಂಪ್ಲಿ, ಲೋಕೇಶ್ ಕಲ್ಮನೆ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು