News Kannada
Friday, September 29 2023
ಶಿವಮೊಗ್ಗ

ಶಿಕಾರಿಪುರದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧೆ: ಬಿ.ಎಸ್.ಯಡಿಯೂರಪ್ಪ

Shimoga: Priyank Kharge has committed an unpardonable crime without an apology, says BS Yediyurappa Yediyurappa
Photo Credit : Facebook

ಶಿಕಾರಿಪುರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಪುತ್ರ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಆಂಜನಾಪುರ ಜಲಾಶಯಕ್ಕೆ ಶುಕ್ರವಾರ ಬಾಗಿನ ಅರ್ಪಿಸಿದ ನಂತರ ಅವರು ಮಾತನಾಡಿದರು. ಪುತ್ರ ವಿಜಯೇಂದ್ರ ತಾಲ್ಲೂಕಿನಲ್ಲಿಯೇ ಹೋರಾಟ ಮಾಡಬೇಕೆಂಬ ಅಪೇಕ್ಷೆ ನನಗೆ ಇದೆ. ಈ ಕ್ಷೇತ್ರದ ಜನತೆ ನನಗಿಂತ ಹೆಚ್ಚಿನ ಮತಗಳ ಅಂತರದಲ್ಲಿ ಬಿ.ವೈ. ವಿಜಯೇಂದ್ರ ಅವರನ್ನು ಗೆಲ್ಲಿಸಬೇಕು ಎಂದು ವಿನಂತಿಸುತ್ತೇನೆ ಎಂದರು.

ಮುಂದಿನ ದಿನಗಳಲ್ಲಿ ಸಂಸದ ರಾಘವೇಂದ್ರ ಜತೆ ತಾಲ್ಲೂಕಿನಲ್ಲಿ ವಿಜಯೇಂದ್ರ ಹೋರಾಟ ಮಾಡುತ್ತಾನೆ. ಅವನಿಗೂ ನಿಮ್ಮ ಆಶೀರ್ವಾದ ಇರಬೇಕು ಎಂದು ಯಡಿಯೂರಪ್ಪ ಅವರು ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ನಡೆದ ಸ್ವಸಹಾಯ ಸಂಘದ ಮಹಿಳೆಯರಿಗೆ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಮನವಿ ಮಾಡಿದರು.

See also  ಶಿವಮೊಗ್ಗದಲ್ಲಿ ಹಿಜಾಬ್‌ ವಿವಾದ ತಾರಕಕ್ಕೆ: ಜಿಲ್ಲೆಯಲ್ಲಿ ಸೆಕ್ಷನ್‌ 144 ಜಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು