News Kannada
Saturday, June 03 2023
ಶಿವಮೊಗ್ಗ

ಶಿವಮೊಗ್ಗ: ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧಿಸಿ ಆರೋಪಿ ಕಾಲಿಗೆ ಗುಂಡೇಟು ಹೊಡೆದ ಪೋಲೀಸರು

Photo Credit : By Author

ಶಿವಮೊಗ್ಗ: ಪ್ರಕರಣ ವಾಪಾಸ್ ಪಡೆಯುವಂತೆ ಒತ್ತಾಯಿಸಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದ ಸಂಬಂಧಿಸಿದಂತೆ ಆರೋಪಿ ಪ್ರವೀಣ ಯಾನೆ ಮೋಟು ಎಂಬಾತನನ್ನ ಬಂಧಿಸಲು ಕುಂಸಿಯ ವೀರಣ್ಣನಬೆನವಳ್ಳಿ ಗ್ರಾಮದಲ್ಲಿ ಬಂಧಿಸಲು ಹೋದ ಗ್ರಾಮಾಂತರ ಪೊಲೀಸರ ಮೇಲೆ ಆರೋಪಿ ಪ್ರವೀಣ್ ದಾಳಿ ನಡೆಸಿದ್ದಾನೆ.

ಗ್ರಾಮಾಂತರ ಪೊಲೀಸ್ ಠಾಣೆಯ ಪಿಸಿ ಶಿವರಾಜ್ ಪ್ರವೀಣನನ್ನ ಹಿಡಿಯಲು ಹೋದಾಗ ದಾಳಿ ನಡೆಸಿದ್ದಾನೆ. ಮಾರಕಾಸ್ತ್ರಗಳಿಂದ ದಾಳಿ ನಡೆಸಲು ಮುಂದಾದಾಗ ಪಿಎಸ್ಐ ರಮೇಶ್ ದಾಳಿ ನಡೆಸದಂತೆ ಎಚ್ಚರಿಸಿದ್ದಾರೆ. ಎಚ್ಚರಿಕೆಯನ್ನ ದಿಕ್ಕರಿಸಿ ಆರೋಪಿ ದಾಳಿ ಮಾಡಲು ಯತ್ನಿಸಿದ್ದಾನೆ.

ಆರೋಪಿಯ ಕಾಲಿಗೆ ಗುಂಡು ಹೊಡೆಯಲಾಗಿದೆ. ಡಿ. 17 ರಂದು ಜೈಲ್ ರಸ್ತೆಯ ವನಜಾಕ್ಷಿ ಎಂಬುವರಿಗೆ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯ ಮುಂದೆ ನಿಲ್ಲಿಸಿದ್ದ ಐ 20 ಕಾರಿಗೆ ಬೆಂಕಿ ಹಚ್ಚಿದ್ದನು. ಈ ಪ್ರಕರಣವನ್ನ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮೂರು ತಿಂಗಳ ಹಿಂದೆ ಶಿವಮೊಗ್ಗದ ಜೈಲ್ ರಸ್ತೆಯಲ್ಲಿ ವನಜಾಕ್ಷಮ್ಮ ಎಂಬುವರನ್ನ ಕೊಲೆ ಯತ್ನ ಪ್ರಕರಣದಲ್ಲಿ ಅಂದರ್ ಆಗಿದ್ದ ಪ್ರವೀಣ ಕೇಸ್ ವಾಪಾಸ್ ಪಡೆಯುವಂತೆ ಬೆದರಿಕೆ ಹಾಕಿದ್ದನು. ಮೂರು ತಿಂಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದ ಪ್ರವೀಣ ಇಂದು ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದಾನೆ.

ದಾಳಿಯಲ್ಲಿ ಪೊಲೀಸ್ ಶಿವರಾಜು ಅವರಿಗೂ ಗಾಯಗಳಾಗಿವೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನೂ ಮೆಗ್ಗಾನ್ ಗೆ ದಾಖಲಿಸಲಾಗಿದೆ.

See also  ಉತ್ತರ ಪ್ರದೇಶ: ಸೆಪ್ಟೆಂಬರ್ 3 ರಂದು ವಿಶ್ವದ ಮೊದಲ ರಣಹದ್ದು ಸಂರಕ್ಷಣಾ ಕೇಂದ್ರ ಉದ್ಘಾಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು