ಶಿವಮೊಗ್ಗ: ಕರ್ನಾಟಕ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ, ರವರು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲ ಭೂತ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಶಿವಮೊಗ್ಗ ನಗರದಲ್ಲಿ ನಿರ್ಮಿಸಲಾಗಿರುವ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಹೊಸ ಕಟ್ಟಡವನ್ನು ಉದ್ಘಾಟನೆ ಮಾಡಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ತ್ಯಾಗರಾಜನ್, ಐಪಿಎಸ್, ಡಿಐಜಿಪಿ, ಪೂರ್ವ ವಲಯ ದಾವಣಗೆರೆ, ಮಿಥುನ್ ಕುಮಾರ್, ಐಪಿಎಸ್, ಪೊಲೀಸ್ ಅಧೀಕ್ಷಕರು ಶಿವಮೊಗ್ಗ, ರೋಹನ್ ಜಗದೀಶ್, ಐಪಿಎಸ್, ಎಎಸ್.ಪಿ ಸಾಗರ, ಈಶ್ವರಪ್ಪ, ಮಾಜಿ ಸಚಿವರು ಮತ್ತು ಶಾಸಕರು, ಶಿವಮೊಗ್ಗ, ಆಯನೂರು ಮಂಜುನಾಥ್, ಎಂ ಎಲ್ ಸಿ ಮತ್ತು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳು ಉಪಸ್ಥಿತರಿದ್ದರು.