News Kannada
Wednesday, May 31 2023
ಶಿವಮೊಗ್ಗ

ಶಿವಮೊಗ್ಗ: ಭಾರತ್ ಜೋಡೋ ಯಾತ್ರೆ ಸಮಾರೋಪದ ಹಿನ್ನೆಲೆ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ

Cultural programme to be organised to mark the conclusion of Bharat Jodo Yatra
Photo Credit : By Author

ಶಿವಮೊಗ್ಗ: ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಸಮಾರೋಪದ ಹಿನ್ನೆಲೆಯಲ್ಲಿ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಪಾದಯಾತ್ರೆ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಪಾದಯಾತ್ರೆಯಲ್ಲಿ ಡೊಳ್ಳು ಕುಣಿತ, ವೀರಗಾಸೆ ಮೊದಲಾದ ಸಾಂಸ್ಕೃತಿಕ ತಂಡಗಳು ಭಾಗವಹಿಸಲಿವೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಕೂಡ ನಡೆಯಲಿದೆ ಎಂದರು.

ಜನವರಿ ೩೦ರ ಸಂಜೆ ೫ ಗಂಟೆಗೆ ಅಶೋಕ ವೃತ್ತದಿಂದ ಗೋಪಿ ಸರ್ಕಲ್‌ವರೆಗೆ ಪಾದಯಾತ್ರೆ ನಡೆಯಲಿದೆ. ಸಂಜೆ ೬ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಸುಧೀರ್‌ಕುಮಾರ್ ಮುರೊಳ್ಳಿ ಮುಖ್ಯ ಭಾಷಣ ಮಾಡಲಿದ್ದಾರೆ.ಜಿಲ್ಲೆಯ ಕಾಂಗ್ರೆಸ್ ಮುಖಂಡರು ಇದರಲ್ಲಿ ಭಾಗವಹಿಸಲಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರು ದೇಶದ ಜನರ ಮನಸ್ಸನ್ನು ಬೆಸೆಯುವ ಉದ್ದೇಶ ಭಾರತ್ ಜೋಡೋ ಯಾತ್ರೆ ನಡೆಸಿದ್ದಾರೆ. ಕನ್ಯಾಕುಮಾರಿಯಿಂದ ಆರಂಭವಾಗಿ, ಕೇರಳ, ಕರ್ನಾಟಕ, ತಮಿಳುನಾಡು, ಆಂದ್ರ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಪಾದಯಾತ್ರೆ ಮೂಲಕವೇ ಸಂಚಾರ ನಡೆಸಿದ್ದಾರೆ. ಇದರ ಸಮಾರೋಪ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಜನವರಿ ೩೦ ರಂದು ನಡೆಯಲಿದೆ. ಹಾಗಾಗಿ ಇಲ್ಲಿಯೂ ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.

ಗೋಪಿ ವೃತ್ತದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎಲ್‌ಇಡಿ ಪರದೆ ಅಳವಡಿಸಲಾಗುವುದು. ರಾಹುಲ್ ಗಾಂಧಿ ಅವರು ಪಾದಯಾತ್ರೆಯಲ್ಲಿ ಜನರೊಂದಿಗೆ ಬೆರೆತ, ಜನರ ಸಮಸ್ಯೆ ಆಲಿಸಿದ ಆಯ್ದ ತುಣುಕುಗಳನ್ನು ಪ್ರಸಾರ ಮಾಡಲಾಗುವುದು. ಉದ್ಯೋಗ ಸಮಸ್ಯೆ ನಿವಾರಣೆ, ದೇಶದ ಜನರೆಲ್ಲಾ ಒಂದೇ ಎಂಬ ಭಾವನೆ ಮೂಡಿಸಲು ಪಾದಯಾತ್ರೆ ನಡೆಸಿದ್ದಾರೆ. ಅಂತಹ ಸಂಗತಿಗಳನ್ನು ಸಾರ್ವಜನಿಕರ ಮುಂದೆ ಇಡಲಾಗುವುದು ಎಂದರು.

ಪ್ರಮುಖರಾದ ಆರ್.ಪ್ರಸನ್ನಕುಮಾರ್, ಕಲಗೋಡು ರತ್ನಾಕರ, ಸತ್ಯನಾರಾಯಣ, ರೇಖಾ ರಂಗನಾಥ್, ವಿಜಯ್‌ಕುಮಾರ್, ನರಸಿಂಹಮೂರ್ತಿ, ಹೆಚ್.ಸಿ.ಯೋಗೀಶ್, ಚಂದ್ರಭೂಪಾಲ್, ಎಸ್.ಪಿ.ದಿನೇಶ್ ಸುದ್ದಿಗೋಷ್ಟಿಯಲ್ಲಿದ್ದರು.

See also  ಶಿವಮೊಗ್ಗ: ನವೆಂಬರ್ ಮಾಸಾಂತ್ಯಕ್ಕೆ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಸಜ್ಜು- ಬಿ.ವೈ.ರಾಘವೇಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು