News Kannada
Sunday, March 26 2023

ಶಿವಮೊಗ್ಗ

ಶಿವಮೊಗ್ಗ: ಬಾಲಕನ ಚಿಕಿತ್ಸೆಗೆ ವ್ಯವಸ್ಥೆ: ಮಾನವೀಯತೆ ಮೆರೆದ ಬಿ.ವೈ. ರಾಘವೇಂದ್ರ

B.Y. Shivakumar showed humanity by arranging for the treatment of a boy. Raghavendra
Photo Credit : By Author

ಶಿವಮೊಗ್ಗ: ಲೋ ಶುಗರ್ ಹಾಗೂ ಗ್ರೋತ್ ಆರ್ಗನ್ ಸಮಸ್ಯೆಯಿಂದ ಬಳಲುತ್ತಿದ್ದ 5 ವರ್ಷದ ಬಾಲಕನಿಗೆ ನಿರಂತರ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಸಂಸದ ಬಿ.ವೈ. ರಾಘವೇಂದ್ರ ಮಾನವೀಯತೆ ಮೆರೆದಿದ್ದಾರೆ.

ತಾಲ್ಲೂಕಿನ ಇಟ್ಟಿಗೆ ಹಳ್ಳಿ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿಗೆ ಇಬ್ಬರು ಮಕ್ಕಳು. ಮೊದಲನೆಯವನು ಎಲ್ಲರಂತೆಯೇ ಇದ್ದರೂ ಎರಡನೆಯ ಮಗು ಶ್ರೇಯಸ್‍ಗೆ 6 ತಿಂಗಳಿನಿಂದಲೇ ವಿಚಿತ್ರ ಸಮಸ್ಯೆ ಕಾಣಿಸಿಕೊಂಡಿತ್ತು. ಲೋ ಶುಗರ್‌ನಿಂದ

ಬಳಲುತ್ತಿದ್ದ. ಜೊತೆಗೆ ಗ್ರೋತ್ ಆರ್ಗನ್ ಸಮಸ್ಯೆ ಕೂಡ ಕಾಣಿಸಿಕೊಂಡಿತ್ತು. ಇದು ಮಗುವಿನ ಬೆಳವಣಿಗೆ ಕುಂಠಿತಗೊಳಿಸುತ್ತಿದ್ದಲ್ಲದೆ, ಪ್ರಾಣಾಪಾಯವೂ ಇತ್ತು.

ವೈದ್ಯರಿಗೆ ಮಗುವಿನ ಸಮಸ್ಯೆ ಏನೆಂದು ಗುರುತಿಸಲು ಮೂರು ವರ್ಷಗಳು ಬೇಕಾಯ್ತು. ನಂತರ ಪ್ರತಿ ತಿಂಗಳೂ ಹತ್ತಾರು ಸಾವಿರ ರೂ.ಗಳ ಮೆಡಿಸಿನ್ ಮತ್ತು ಚಿಕಿತ್ಸಾವೆಚ್ಚ ಭರಿಸಬೇಕಾಗಿತ್ತು. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಕುಟುಂಬಕ್ಕೆ ದುಬಾರಿ ಚಿಕಿತ್ಸಾ ವೆಚ್ಚ ಭರಿಸುವುದೇ ಅಸಾಧ್ಯ ಎನ್ನುವಂತಾಗಿತ್ತು. ಸದ್ಯ ಮಗುವಿಗೆ 5 ವರ್ಷ 4 ತಿಂಗಳಾಗಿದ್ದು, ಇನ್ನು ಚಿಕಿತ್ಸೆ ಕೊಡಿಸುವುದು ಅಸಾಧ್ಯ ಎನ್ನುವಂತಹ ಪರಿಸ್ಥಿತಿ ಎದುರಾಗಿದ್ದು, ಈ ಬಗ್ಗೆ ಸ್ಥಳೀಯ ಬಿಜೆಪಿ ಮುಖಂಡರು ಸಂಸದ ಬಿ.ವೈ. ರಾಘವೇಂದ್ರ ಅವರ ಗಮನ ಸೆಳೆದಿದ್ದಾರೆ.

ಸಮಸ್ಯೆಯನ್ನು ಅರಿತುಕೊಂಡ ಸಂಸದರು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಗುವಿಗೆ 18 ವರ್ಷವಾಗುವವರೆಗೂ ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸಲು ಕ್ರಮ ಕೈಗೊಂಡಿದ್ದಾರೆ.

ಶುಕ್ರವಾರ ಬೆಳಿಗ್ಗೆ ಮಗುವಿಗೆ ಸರ್ಕಾರದಿಂದ ಮೊದಲ ಔಷಧಿಗಳನ್ನು ಒದಗಿಸಲಾಗಿದ್ದು, ಸಂಸದರ ಬಿ.ವೈ. ರಾಘವೇಂದ್ರ ಮಗುವಿಗೆ ಔಷಧಿ ನೀಡಿ, ಶೀಘ್ರದಲ್ಲೇ ಮಗು ಎಲ್ಲ ಮಕ್ಕಳಂತೆ ಆರೋಗ್ಯವಾಗಿರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತಮ್ಮಡಿಹಳ್ಳಿ ನಾಗರಾಜ್, ಬಿಜೆಪಿ ರೈತಮೋರ್ಚಾ ಪ್ರಧಾನಕಾರ್ಯದರ್ಶಿ ಇಟ್ಟಿಗೆಹಳ್ಳಿ ನಾಗೇಂದ್ರ, ಪ್ರಮುಖರಾದ ಸತೀಶ್, ಚೇತನ್ ಮತ್ತಿತರರಿದ್ದರು.

ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಕೃತಜ್ಞತೆ ಸಲ್ಲಿಸಿರುವ ಮಗುವಿನ ಪೋಷಕರಾದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿ ಸಂಕಷ್ಟದ ಸಂದರ್ಭದಲ್ಲಿ ಸ್ಪಂದಿಸಿ, ಮಗುವಿಗೆ ಚಿಕಿತ್ಸೆ ವ್ಯವಸ್ಥೆ ಮಾಡಿಸುವ ಮೂಲಕ ತಮ್ಮ ಬದುಕಲ್ಲಿ ಭರವಸೆ ಮೂಡಿಸಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

See also  ಶಿವಮೊಗ್ಗ: ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು