News Kannada
Sunday, June 04 2023
ಶಿವಮೊಗ್ಗ

ಒಳಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್ ನಾಯಕರ ಮೊಸಳೆ ಕಣ್ಣೀರು- ಆರಗ ಜ್ಞಾನೇಂದ್ರ

Crocodile tears of Congress leaders on internal reservation issue: Araga Jnanendra
Photo Credit : News Kannada

ಶಿಕಾರಿಪುರ, ಮಾ.28: ಸೋಮವಾರ, ಶಿವಮೊಗ್ಗ ಜಿಲ್ಲೆಯ ಶಿಕಾರಪುರ ಪಟ್ಟಣದಲ್ಲಿ ಸ್ಥಳೀಯ ಬಂಜಾರಾ ಸಮುದಾಯದ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ, ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು, ಶಿಕಾರಿಪುರಕ್ಕೆ ತೆರಳಿ, ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಬಗ್ಗೆ ಅವಲೋಕನ ನಡೆಸಿದರು.

ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ, ಜಿಲ್ಲಾ ಪೋಲಿಸ್ ಮುಖ್ಯಸ್ಥ ಮಿಥುನ್ ಕುಮಾರ್ ಸೇರಿದಂತೆ, ಸ್ಥಳೀಯ ಅಧಿಕಾರಿಗಳೂ ಉಪಸ್ಥಿತರಿದ್ದರು.

ನಂತರ ಮಾಧ್ಯಮದ ಸ್ನೇಹಿತರೊಂದಿಗೆ ಮಾತನಾಡಿದ ಸಚಿವರು, ಶಿಕಾರಿಪುರ ಪಟ್ಟಣದಲ್ಲಿ, ಪರಿಸ್ಥಿತಿ ತಿಳಿಯಾಗಿದೆ. ಯಾವುದೇ ಅಹಿತಕರ ಘಟನೆ ತಪ್ಪಿಸಲು, ಕ್ರಮ ಕೈಗೊಳ್ಳಲಾಗಿದೆ, ಎಂದಿದ್ದಾರೆ.

ಪ್ರತಿಭಟನೆಗೆ ಸಂಬಂಧಿಸಿದಂತೆ, ಉತ್ತರಿಸಿದ ಸಚಿವರು, ಸರಕಾರ, ಪರಿಶಿಷ್ಠ ಜಾತಿ ಸಮುದಾಯಗಳಿಗೆ, ಒಳ ಮೀಸಲಾತಿ ವಿಷಯಕ್ಕೆ ಸಂಬಂಧಿಸಿ ದಂತೆ, ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸುಗಳನ್ನು, ಅನುಷ್ಟಾನ ಮಾಡಿಲ್ಲ.

ಈ ಕುರಿತು ವಿರೋಧ ಪಕ್ಷದ ನಾಯಕರು ಅಪಪ್ರಚಾರ ನಡೆಸಿ, ರಾಜಕೀಯ ಬೇಳೆ ಬೇಯಿಸಲು ಹೊರಟಿದ್ದಾರೆ.

ಚುನಾವಣೆಯ ಹೊಸ್ತಿಲಲ್ಲಿ, ಕಾಂಗ್ರೆಸ್ ನಾಯಕರು, ಪರಿಶಿಷ್ಠ ಜಾತಿ ಪಂಗಡಗಳ ಮಧ್ಯೆ ಒಡಕು ಮೂಡಿಸಲು ಯತ್ನಿಸುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ, ಯಾವುದೇ ಕ್ರಮಕ್ಕೆ ಮುಂದಾಗದೆ, ನ್ಯಾಯ ಒದಗಿಸಲು ವಿಫಲರಾದ, ವಿರೋಧಿ ಪಕ್ಷದ ನಾಯಕರು, ಒಳ ಮೀಸಲಾತಿ ವಿಷಯಕ್ಕೆ ಸಂಬಂಧಿಸಿ ದಂತೆ, ಮುಖ್ಯ ಮಂತ್ರಿ  ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದ ಮೇಲೆ ಗೂಬೇ ಕೂರಿಸುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

ಒಳಮೀಸಲಾತಿ ವಿಷಯಕ್ಕೆ ಸಂಬಂಧಿಸಿ ದಂತೆ, ಮುಖ್ಯ ಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಯವರು, ಮುಕ್ತವಾಗಿ ಚರ್ಚೆ ನಡೆಸಲು ಸಿದ್ದರಿದ್ದು, ಯಾವುದೇ ಕಾರಣಕ್ಕೂ ಯಾರೇ ಆಗಲಿ, ಕಾನೂನನ್ನು ಕೈಗೆ ತೆಗೆದುಕೊಳ್ಳ ಬಾರದು, ಎಂದು ಹೇಳಿದ್ದಾರೆ.

See also  ಮಂಗಳೂರು: ಕಮ್ಯೂನಿಸ್ಟ್ ಹೆಜ್ಜೆಗಳು ಈಗಲೂ ದೇಶದಲ್ಲಿ ಹಸಿರಾಗಿವೆ - ಕೆ.ಮಹಾಂತೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು