News Kannada
Sunday, October 01 2023
ಶಿವಮೊಗ್ಗ

ಶಿವಮೊಗ್ಗ: ಆರಗ ಜ್ಞಾನೇಂದ್ರ ಚುನಾವಣಾ ಪ್ರಚಾರಕ್ಕೆ ವಿರೋಧ ವ್ಯಕ್ತಪಡಿಸಿದ ಬಂಜಾರ ಸಮುದಾಯ

Shimoga: Banjara community opposes Araga Jnanendra's election campaign
Photo Credit : By Author

ಶಿವಮೊಗ್ಗ: ಚುನಾವಣಾ ಪ್ರಚಾರಕ್ಕೆ ಹೋಗಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಬಂಜಾರ ಸಮುದಾಯ ವಿರೋಧ ವ್ಯಕ್ತಪಡಿಸಿದ ಘಟನೆ ಸೋಮವಾರ ನಡೆದಿದೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರವಾದ ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪದಲ್ಲಿ ಸೋಮವಾರ ಆರಗ ಜ್ಞಾನೇಂದ್ರ ಪ್ರಚಾರಕ್ಕೆ ಹೋದಾಗ ಅಲ್ಲಿನ ಯುವಕರು ತಮ್ಮ ಸೇವಾಲಾಲ್ ಅವರ ಬಾವುಟ ಹಿಡಿದು ವಿರೋಧ ವ್ಯಕ್ತಪಡಿಸಿದ್ದಾರೆ. ತಾಂಡಾ ಬಚಾವೋ, ಬಿಜೆಪಿ ಹಠಾವೋ ಎಂದು ಘೋಷಣೆ ಕೂಗಿದ್ದಾರೆ.

ಗೃಹ ಸಚಿವರು ಸೋಮವಾರ ಮತ್ತೂರು ಹೋಬಳಿಯ ಗ್ರಾಮಗಳಲ್ಲಿ ತಮ್ಮ ಚುನಾವಣಾ ಪ್ರಚಾರಕ್ಕೆ ಹೋಗಿದ್ದಾರೆ. ಈ ವೇಳೆ‌ ಮಂಡೇನಕೊಪ್ಪ ತಾಂಡಾಕ್ಕೆ ಹೋದಾಗ ಬಂಜಾರ ಯುವಕರು ಗೃಹ ಸಚಿವರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಒಳ ಮೀಸಲಾತಿ ವಿಚಾರದಲ್ಲಿ ತಮಗೆ ಇದ್ದ ಮೀಸಲಾತಿಯನ್ನು ಕಡಿತಗೊಳಿಸಿದ್ದು ಖಂಡನೀಯ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಗ್ರಾಮದಲ್ಲಿ ಪಾದಯಾತ್ರೆ ನಡೆಸದಂತೆ ತಡೆದಿದ್ದಾರೆ. ನಂತರ ಗೃಹ ಸಚಿವರು ಮುಂದಿನ ಗ್ರಾಮಕ್ಕೆ ಪ್ರಚಾರಕ್ಕೆ ತೆರಳಿದ್ದಾರೆ. ಕಳೆದ ವಾರ ಶಿಕಾರಿಪುರ ತಾಲೂಕು ತರಲಘಟ್ಟ ತಾಂಡಾದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಅವರು ಪ್ರಚಾರಕ್ಕೆ ಹೋದಾಗ ಇದೇ ರೀತಿ ಬಂಜಾರ ಯುವಕರು ವಿರೋಧ ವ್ಯಕ್ತಪಡಿಸಿದ್ದರು.

See also  ಹಮೀರ್ಪುರ: ಮದುವೆ ಸ್ಥಳದಲ್ಲಿ ಬೆಂಕಿ ಅವಘಡ, 22 ಮಂದಿಗೆ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು