News Kannada
Sunday, September 24 2023
ಶಿವಮೊಗ್ಗ

ಅಡಕೆ ಆಮದು ಸುಂಕ ಹೆಚ್ಚಿಸಿ ಬೆಳಗಾರರ ರಕ್ಷಣೆ, ಸಮಾವೇಶದಲ್ಲಿ ಮೋದಿ ಹೇಳಿಕೆ

PM Modi to inaugurate India Energy Week in B'luru
Photo Credit : News Kannada

ಶಿವಮೊಗ್ಗ: ಕರ್ನಾಟಕವು ಸ್ಟಾರ್ಟ್​ಪ್ ಕ್ಷೇತ್ರದಲ್ಲೂ ನಾವು ಸಾಕಷ್ಟು ಬೆಳೆದಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು. ಶಿವಮೊಗ್ಗದಲ್ಲಿ ಆಯನೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದರು.

ಕರ್ನಾಟಕದ ಅಭಿವೃದ್ಧಿಯನ್ನು ಕಾಂಗ್ರೆಸ್​ ಪಕ್ಷ ಎಂದೂ ಬಯಸುವುದಿಲ್ಲ. ಭ್ರಷ್ಟಾಚಾರದ ಮೂಲಕ ಕಾಂಗ್ರೆಸ್​ ನಾಯಕರು ಶ್ರೀಮಂತರಾಗುತ್ತಿದ್ದಾರೆ. ಆದರೆ ಕರ್ನಾಟಕದ ಅಭಿವೃದ್ಧಿಗೆ ಒಳ್ಳೆಯ ಯೋಜನೆ ತಂದಿಲ್ಲ ಎಂದರು.

ಅಡಕೆ‌ ಆಮದು ನೀತಿಯಲ್ಲಿ ಕಾಂಗ್ರೆಸ್​ಗೂ ಬಿಜೆಪಿಗೂ ಅಂತರವಿದೆ. ಈ ಹಿಂದೆ ಕರ್ನಾಟಕದ ಅಡಕೆ ಬೆಳೆಗಾರರಿಗೆ ಸಂಕಷ್ಟ ಎದುರಾಗಿತ್ತು. ಯಡಿಯೂರಪ್ಪ ಗುಜರಾತ್​ಗೆ ನನ್ನನ್ನು ನೋಡಲು ಬಂದಿದ್ದರು. ರೈತರ ರಕ್ಷಣೆ ಮಾಡುವಂತೆ ನನ್ನನ್ನು ಕೇಳಿಕೊಂಡಿದ್ದರು. ವಿದೇಶದಿಂದ ಅಡಿಕೆ ಆಮದು ಮಾಡಿದರೆ ಇಲ್ಲಿನ ರೈತರಿಗೆ ಅನ್ಯಾಯವಾಗಲಿದೆ ಎಂದಿದ್ದರು. ನಾನು ದೆಹಲಿಯಲ್ಲಿ ಅಧಿಕಾರ ಹಿಡಿದ ಬಳಿಕ ನೀತಿಯಲ್ಲಿ ಬದಲಾವಣೆ ಮಾಡುವ ಮೂಲಕ ಅಡಿಕೆ ಆಮದು ಸುಂಕ ಹೆಚ್ಚಿಸಿದ್ದೇವೆ. ಇದರಿಂದ ಕರ್ನಾಟಕದ ರೈತರಿಗೆ ಅನುಕೂಲವಾಗಿದೆ ಎಂದರು.

See also  ಶಿವಮೊಗ್ಗ: ಚಿಕಿತ್ಸೆ ಫಲಕಾರಿಯಾಗದೇ ಅಪರಿಚಿತ ಮಹಿಳೆ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು