ಶಿವಮೊಗ್ಗ: ಭಾರತದ ಪ್ರಧಾನಿಯಾಗಿದ್ದ ನೆಹರೂ ಅವರಿಗೆ ಬಜರಂಗದಳ, ಆರ್ಎಸ್ಎಸ್ ಸಂಘಟನೆ ನಿಷೇಧ ಮಾಡಲು ಸಾಧ್ಯವಾಗಿರಲಿಲ್ಲ. ಇನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಸಾಧ್ಯವೇ ಎಂದು ಬಿಜೆಪಿ ಶಾಸಕ ಚನ್ನಬಸಪ್ಪ ಹೇಳಿದ್ದಾರೆ.
ಶಿವಮೊಗ್ಗ ನಗರದಲ್ಲಿ ಮಾತನಾಡಿದ ಅವರು ಮನೆ ಮನೆಯಲ್ಲಿ ಹಿಂದುತ್ವ ಮತ್ತು ಆರ್ಎಸ್ಎಸ್ ಬೆರೆತು ಹೋಗಿದೆ. ಪ್ರಿಯಾಂಕ್ ಖರ್ಗೆ ಇಂತಹ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಅಶ್ವತ್ಥ್ ನಾರಾಯಣ, ಕಾರ್ಯಕರ್ತರ ಮೇಲೆ ಕೇಸ್ ದಾಖಲಾಗಿದೆ ಎಂದು ಆಕ್ರೋಶ ಹೊರಹಾಕಿದರು.