News Karnataka Kannada
Friday, March 29 2024
Cricket
ಮೈಸೂರು

ಕಂಬಳಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ: ಸಂಸದ ಪ್ರತಾಪ್ ಸಿಂಹ

Photo Credit :

ಕಂಬಳಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ: ಸಂಸದ ಪ್ರತಾಪ್ ಸಿಂಹ

ಮೈಸೂರು: ಸಮಾಜಿಕ ಜಾಲಾತಾಣಗಳಲ್ಲಿ ಸ್ಪೇಟಸ್, ಫೋಟೋ, ಕಮೆಂಟ್ಸ್ ಹಾಕಿ ಮನೆಯಲ್ಲಿ ಕುಳಿತುಕೊಂಡರೆ ಆಗುವುದಿಲ್ಲ, ತಮಿಳರಂತೆ ಬೀದಿಗಳಿದು ಹೋರಾಟ ನಡೆಸಬೇಕು, ನಾನು ಸಹ ಕಂಬಳಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ಕರವಾಳಿಯ ಜನಪದ ಕ್ರೀಡೆ ಕಂಬಳಕ್ಕೆ ನನ್ನ ಸಂಪೂರ್ಣ ಬೆಂಬಲವಿದ್ದು, ಬಿಜೆಪಿಯ ರಾಜ್ಯಧ್ಯಾಕ್ಷ ಬಿ.ಎಸ್ ಯಡಿಯೂರಪ್ಪ ಕಂಬಳಕ್ಕೆ ತಮ್ಮ ಸಹಮತ ಸೂಚಿಸಿದ್ದು ನಾವು ಕಂಬಳಕ್ಕೆ ಒಪ್ಪಿಗೆ ಪಡೆಯಬೇಕಾದರೆ, ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಬೇಕು, ಜೊತೆಗೆ ತಮಿಳರಂತೆ ಲಕ್ಷಾಂತರ ಮಂದಿ ಬೀದಿಗಳಿದು ಹೋರಾಟ ನೆಡಸಬೇಕು, ಅದನ್ನ ಬಿಟ್ಟು ಸಮಾಜಿಕ ಜಾಲಾತಾಣಗಳಾದ ಫೇಸ್ ಬುಕ್, ಟ್ವೀಟರ್, ವಾಟ್ಸ್ ಅಫ್ ಗಳಲ್ಲಿ ಫೋಟೋಸ್, ಕಮೆಂಟ್ಸ್ ಹಾಕಿ ಐ ಸಪೋರ್ಟ್ ಕಂಬಳ ಎಂದು ಹಾಕುವುದಲ್ಲ. ಬೀದಿಗಿಳಿದು ಹೋರಾಟ ನಡೆಸಬೇಕು ಎಂದು ಕಂಬಳಕ್ಕೆ ಬೆಂಬಲ ಸೂಚಿಸಿ ಸಾಮಾಜಿಕ ಜಾಲಾತಾಣಗಳಲ್ಲಿ ಪೋಸ್ಟರ್ ಹಾಕುವರಿಗೆ ಬಗ್ಗೆ ತಮ್ಮ ಅಕ್ರೋಶ ವ್ಯಕ್ತ ಪಡಿಸಿದ ಸಂಸದರು, ಕಂಬಳದ ಬಗ್ಗೆ ತಮ್ಮ ಅಭಿಪ್ರಾಯವನ್ನ ವ್ಯಕ್ತ ಪಡಿಸಿದರು.

ಇನ್ನೂ ಈಶ್ವರಪ್ಪ ಅವರ ಬ್ರಿಗೇಡ್ ಗಲಾಟೆಯ ಬಗ್ಗೆ, ನಾನು ಅಭಿಪ್ರಾಯ ಹೇಳುವಷ್ಟು ದೊಡ್ಡವನಲ್ಲ, ಆಹರ್ತೆಯೂ ನನಗೆ ಇಲ್ಲ, ಹಿರಿಯರು ಕುಳಿತುಕೊಂಡು ಸಮಸ್ಯೆಯನ್ನ ಪಕ್ಷದ ವೇದಿಕೆಯಲ್ಲಿ ಸರಿಪಡಿಸಿಕೊಳ್ಳುತ್ತಾರೆ ಎಂದರು.

25ಕ್ಕೆ ಮೈಸೂರಿನಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಉದ್ಘಾಟನೆ: ಮೈಸೂರಿನ ಜನತೆಯ ಬಹುದಿನದ ಬೇಡಿಕೆಯಾದ ಪಾಸ್ ಪೋರ್ಟ್ ಸೇವಾ ಕೇಂದ್ರವನ್ನ ಇದೇ ತಿಂಗಳ 25 ರಂದು ಕೇಂದ್ರ ಸಚಿವ ಅನಂತ್ ಕುಮಾರ್ ಚಾಲನೆ ನೀಡಲಿದ್ದು, ಪ್ರಾರಂಭಿಕವಾಗಿ ಮೇಟಗಳ್ಳಿಯಲ್ಲಿ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಅಂಚೇ ಕಛೇರಿಯ ಒಂದು ಭಾಗದಲ್ಲಿ ಈ ಪಾಸ್ ಪೋರ್ಟ್ ಸೇವಾ ಕೇಂದ್ರವನ್ನ ಕೇಂದ್ರ ಸಚಿವರು ಉದ್ಘಾಟನೆ ಮಾಡಲಿದ್ದು, ಪ್ರಾಯೋಗಿಕವಾಗಿ ಮೈಸೂರು ಹಾಗೂ ಚಾಮಾರಾಜ ಜಿಲ್ಲೆಗಳಿಗೆ ಸೀಮಿತವಾಗಿದೆ ಕಾರ್ಯನಿರ್ವಹಿಸಲಿದ್ದು, ನಂತರ ಇತರೆ ಜಿಲ್ಲೆಗಳಿಗೂ ವಿಸ್ತರಿಸುವ ಯೋಜನೆ ಹಾಕಲಿದೆ ಎಂದು ಸಂಸದರು ತಿಳಿಸಿದರು.

ಮೈಸೂರು ಬೆಂಗಳೂರು ಜೋಡಿ ರೈಲು ಮಾರ್ಗ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಲಿದ್ದು, ಶ್ರೀರಂಗಪಟ್ಟಣದ ಬಳಿ ಇರುವ ಟಿಪ್ಪು ಸುಲ್ತಾನ್ ಸ್ಮಾರಕ ಸ್ಥಳಾಂತರ ಪ್ರಕ್ರಿಯೆ ನಡೆಯುತ್ತಿದ್ದು, ಮುಗಿದ ನಂತರ ಏಪ್ರಿಲ್ ನಲ್ಲಿ ಬೆಂಗಳೂರು-ಮೈಸೂರು ನಡುವೆ ಜೋಡಿ ರೈಲು ಮಾರ್ಗ ಕಾರ್ಯರಂಭ ಮಾಡಲಿದ್ದು, ಹೆಚ್ಚುವರಿ ರೈಲುಗಳನ್ನ ಹಾಗೂ ವೇಗದ ರೈಲುಗಳನ್ನ ಓಡಿಸಲು ಕೇಂದ್ರ ರೈಲ್ವೆ ಸಚಿವರ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದೇನೆ ಎಂದು ಇದೇ ಸಂಧರ್ಭದಲ್ಲಿ ಸಂಸದರು ಸ್ಪಷ್ಟ ಪಡಿಸಿದರು.

ಸ್ಮಾರ್ಟ್ ಸಿಟಿ ಮೈಸೂರಿಗೆ ತಪ್ಪಲು ರಾಜ್ಯ ಸರ್ಕಾರ ಹಾಗೂ ಮೈಸೂರು ಮಹಾನಗರ ಪಾಲಿಕೆ ನೇರ ಕಾರಣವಾಗಿದ್ದು, 2011ರಿಂದ ಮೈಸೂರು ಮಹಾನಗರ ಪಾಲಿಕೆಯ ಆಡಿಟ್ ರಿಪೋರ್ಟ್ ಸರಿಯಾಗಿ ಆಗಿಲ್ಲ. ಜೊತೆಗೆ ನರ್ಮ್ ಯೋಜನೆಯಿಂದ ಬಿಡುಗಡೆಯಾದ ಕೋಟ್ಯಾಂತರ ರೂಪಾಯಿ ಹಣ ಶೇಕಡ 80 ರಷ್ಟು ಹಣ ಸರಿಯಾಗಿ ಬಳಕೆಯಾಗಿಲ್ಲ. ಬಳಕೆಯಾಗಿರುವ ಹಣವೂ ಸಹ ಸರಿಯಾದ ಲೆಕ್ಕ ಇಲ್ಲ. ಜೊತೆಗೆ ರಾಜ್ಯ ಸರ್ಕಾರ ಕೇಂದ್ರ ನಗರಾಭಿವೃದ್ದಿ ಇಲಾಖೆಗೆ ಮೈಸೂರನ್ನ ಸ್ಮಾರ್ಟ್ ಸಿಟಿ ಪಟ್ಟಿಗೆ ಸೇರಿಸುವಂತೆ ಪ್ರಸ್ತಾವನೆಯನ್ನೂ ಸಹ ಕಳುಹಿಸಿಲ್ಲ ಎಂದು ಮೈಸೂರಿಗೆ ಸ್ಮಾರ್ಟ್ ಸಿಟಿ ತಪ್ಪಲು ಕಾರಣವೇನು ಎಂಬುದಕ್ಕೆ ಕಾರಣ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು