ಮೈಸೂರು: ಮಾನಸಿಕ ಒತ್ತಡಕ್ಕೆ ಬಲಿಯಾಗಿ ತೀವ್ರವಾಗಿ ಮನನೊಂದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ಜೆ.ಎಸ್.ಎಸ್ ವೈದ್ಯಕೀಯ ಹಾಸ್ಟೆಲ್ ನಲ್ಲಿ ನಡೆದಿದೆ.
ನೇಣಿಗೆ ಶರಣಾಗಿರುವ ವಿದ್ಯಾರ್ಥಿ ಬ್ರಿಗೇಂದ್ರ ಆನಂದ್ ಎಂದು ಗುರುತಿಸಲಾಗಿದ್ದು, ಈತ ಮೂಲತಃ ಬಿಹಾರದ ಮೂಲದವರು. ಇವರು ನಗರದ ಜೆ.ಎಸ್.ಎಸ್ ಮೆಡಿಕಲ್ ಕಾಲೇಜಿನಲ್ಲಿ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ‘ಮಾನಸಿಕ ಒತ್ತಡ ತಾಳಲಾರದೆ ನೇಣಿಗೆ ಶರಣಾಗುತ್ತಿದ್ದೇನೆ ನನ್ನನ್ನು ಕ್ಷಮಿಸಿ’ ಎಂದು ಡೆತ್ ನೋಟ್ ಬರೆದಿಟ್ಟು ಕಳೆದ ರಾತ್ರಿ ವಿದ್ಯಾರ್ಥಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಹಿನ್ನಲೆಯಲ್ಲಿ ಎನ್.ಆರ್ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.