ಮೈಸೂರು: ಕಳೆದ 15 ದಿನಗಳಿಂದ ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ ಚಿರತೆ ಇಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನ್ ಗೆ ಬಿದ್ದಿರುವ ಘಟನೆ ನಂಜನಗೂಡು ತಾಲ್ಲೂಕಿನ ಯಾಲಹಳ್ಳಿಯಲ್ಲಿ ನಡೆದಿದೆ.
ಜಿಲ್ಲೆಯ ನಂಜನಗೂಡು ತಾಲೂಕಿನ ಯಾಲಹಳ್ಳಿ ಗ್ರಾಮದ ಸುತ್ತ ಕಳೆದ 15 ದಿನಗಳಿಂದ ಓಡಾಡುತ್ತಿದ್ದ ಚಿರತೆಯೊಂದು ಗ್ರಾಮಸ್ಥರಲ್ಲಿ ಭಯ ಉಂಟುಮಾಡಿತ್ತು. ಈ ಹಿನ್ನಲ್ಲೆಯಲ್ಲಿ ಅರಣ್ಯ ಇಲಾಖೆಯವರು ಗ್ರಾಮದ ರೈತನ ಹೊಲದಲ್ಲಿ ಚಿರತೆ ಸೆರೆಗಾಗಿ ಬೋನ್ ಇರಿಸಿದರು. ಕಳೆದ ರಾತ್ರಿ ಬೋನಿನಲ್ಲಿದ್ದ ನಾಯಿಯನ್ನ ಹಿಡಿಯಲು ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಆಗಮಿಸಿ ಚಿರತೆಯನ್ನ ಕಾಡಿಗೆ ಬಿಡಲು ತೆಗೆದುಕೊಂಡು ಹೋಗಿದ್ದಾರೆ.