News Karnataka Kannada
Friday, April 26 2024
ಮೈಸೂರು

ಹುತ್ತೂರು ಕೆರೆಗೆ ನೀರು ಹರಿಸಲು ಕಾಮಗಾರಿ ಪರಿಶೀಲನೆ

Photo Credit :

ಹುತ್ತೂರು ಕೆರೆಗೆ ನೀರು ಹರಿಸಲು ಕಾಮಗಾರಿ ಪರಿಶೀಲನೆ

ಗುಂಡ್ಲುಪೇಟೆ: ತಾಲ್ಲೂಕಿನ ಹುತ್ತೂರು ಕೆರೆಗೆ ಭೇಟಿ ನೀಡಿದ ಶಾಸಕ ಸಿ.ಎಸ್.ನಿರಂಜನಕುಮಾರ್ ಹೋಬಳಿಯ ಇತರ ಕೆರೆಗಳಿಗೆ ನೀರುಣಿಸುವ ಕಾಮಗಾರಿಯನ್ನು ಪರಿಶೀಲಿಸಿದರು.

ತಾಲೂಕಿನ ಹುತ್ತೂರು ಕೆರೆಯಿಂದ ಸಮೀಪದ ವಡ್ಡಗೆರೆ ಕೆರೆಗೆ ನೀರೆತ್ತಲು ಪಂಪ್ ಹೌಸ್ ನಿರ್ಮಾಣ ಹಾಗೂ ಪೈಪ್ ಲೈನ್ ಕಾಮಗಾರಿಗಳ ಬಗ್ಗೆ ಕಾವೇರಿ ನೀರಾವರಿ ನಿಗಮದ ಇಂಜಿನಿಯರ್ ರಾಜೇಂದ್ರ ಪ್ರಸಾದ್ ಅವರಿಂದ ಮಾಹಿತಿ ಪಡೆದರು.

ಈ ವೇಳೆ ಮಾಹಿತಿ ನೀಡಿದ ಇಂಜಿನಿಯರ್ ರಾಜೇಂದ್ರ ಪ್ರಸಾದ್ ವಡ್ಡಗೆರೆ ಸಮೀಪ ಕೇವಲ 300 ಮೀಟರ್ ಪೈಪ್ ಲೈನ್ ಅಳವಡಿಸಬೇಕಾಗಿದ್ದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಅಳವಡಿಸಲಾಗಿದ್ದು ಸಂಪರ್ಕವನ್ನೂ ಪಡೆಯಲಾಗಿದೆ. ಮೋಟಾರ್ ಗಳನ್ನು ಸ್ಥಳಕ್ಕೆ ತರಲಾಗಿದೆ. ಹಗಲಿರುಳೂ ಕಾಮಗಾರಿ ನಡೆಸಲಾಗುತ್ತಿದ್ದು ಪಂಪ್ ಹೌಸ್ ಕಾಮಗಾರಿ ಮುಕ್ತಾಯದ ಹಂತದಲ್ಲಿದೆ.

ಮುಂದಿನ ತಿಂಗಳಲ್ಲಿ ನೀರು ಹರಿಸಲು ಸಾಧ್ಯವಾಗಲಿದೆ. ಹುತ್ತೂರು ಕೆರೆಯಿಂದ ವಡ್ಡಗೆರೆಕೆರೆಗೆ ಮಾತ್ರ ಪೈಪ್ ಲೈನ್ ಅಳವಡಿಸಿ ಅಲ್ಲಿಂದ ಮುಂದಿನ ಕೆರೆಗಳಿಗೆ ಜಲಮಾರ್ಗದಲ್ಲಿಯೇ ನೀರು ಹರಿಸಿದರೆ ಮಾತ್ರ ಅಂತರ್ಜಲ ವೃದ್ದಿಗೆ ನೆರವಾಗಲಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು