News Karnataka Kannada
Thursday, March 28 2024
Cricket
ಮೈಸೂರು

ಹೆಜ್ಜೇನು ದಾಳಿಗೆ ರೈತ ಸಾವು

Photo Credit :

ಹೆಜ್ಜೇನು ದಾಳಿಗೆ ರೈತ ಸಾವು

ನಾಗಮಂಗಲ: ತೆಂಗಿನ ಮರದಲ್ಲಿ ಕಾಯಿ ಕೀಳುವ ಸಂದರ್ಭ ಹೆಜ್ಜೇನು ದಾಳಿ ಮಾಡಿದ ಪರಿಣಾಮ ರೈತ ಸಾವನ್ನಪ್ಪಿದ ಘಟನೆ ತಾಲೂಕಿನ ಕಸಬಾ ಹೋಬಳಿ ಹಾಲತಿ ಗ್ರಾಮದಲ್ಲಿ ನಡೆದಿದೆ.

ಹಾಲತಿ ಗ್ರಾಮದ ರೈತ ಎಚ್.ವಿ. ವೆಂಕಟೇಶ್(39) ಎಂಬವರೇ ಸಾವಿಗೀಡಾದ ದುರ್ದೈವಿ. ಇವರು ಮಧ್ಯಾಹ್ನ ಊರಿನ ತೋಟದಲ್ಲಿ ತೆಂಗಿನಕಾಯಿ ಕೀಳಲು ಯಂತ್ರವನ್ನು ಬಳಸಿ ಮರವನ್ನೇರಿದ ವೇಳೆ ಮರದಲ್ಲಿದ್ದ ಹೆಜ್ಜೇನು ದಾಳಿ ಮಾಡಿದೆ.

ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ವೇಗವಾಗಿ ಮರದಿಂದ ಇಳಿದ ವೆಂಕಟೇಶ್ ಸಮೀಪದಲ್ಲೇ ಹರಿಯುತ್ತಿದ್ದ ಹೇಮಾವತಿ ನಾಲೆಯಲ್ಲಿ ಮುಳುಗಿ ಅವುಗಳ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ಆದರೂ ಅವು ಬಿಡದೆ ದಾಳಿ ಮಾಡಿವೆ. ಬಳಿಕ ತಪ್ಪಿಸಿಕೊಂಡು ಹೋಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಬಂದು ಮಲಗಿದ್ದಾಗ ರಾತ್ರಿ 3 ಗಂಟೆ ಸಮಯದಲ್ಲಿ ಸಾವಿಗೀಡಾಗಿದ್ದಾರೆ.

ಸೋಮವಾರ ಬೆಳಗ್ಗೆ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಂದ ಗ್ರಾಮಸ್ಥರು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಮೃತದೇಹದ ಪರೀಕ್ಷೆಯ ನಂತರ ಶವವನ್ನು ಗ್ರಾಮಕ್ಕೆ ತಂದು ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಮೃತ ವೆಂಕಟೇಶ್ ಪತ್ನಿ ಶಾರದ ಸೇರಿದಂತೆ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು