News Kannada
Saturday, April 01 2023

ಮೈಸೂರು

ದೇವರಾಜ ಅರಸ್ ಹುಟ್ಟೂರಲ್ಲಿ ಅಭಿವೃದ್ಧಿ ಕಾರ್ಯ

Photo Credit :

ದೇವರಾಜ ಅರಸ್ ಹುಟ್ಟೂರಲ್ಲಿ ಅಭಿವೃದ್ಧಿ ಕಾರ್ಯ

ಮೈಸೂರು: ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸ್ ಅವರ ಹುಟ್ಟೂರು ಪಿರಿಯಾಪಟ್ಟಣ ತಾಲೂಕಿನ ಬೆಟ್ಟದತುಂಗ ಗ್ರಾಮದ ಅಭಿವೃದ್ಧಿಗೆ ಸರ್ಕಾರ ಯೋಜನೆ ರೂಪಿಸಿದ್ದು, ನ.13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ಮುಖ್ಯಮಂತ್ರಿಗಳು ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಸಿ.ಶಿಖಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ,  ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಕಾರ್ಯಕ್ರಮದ ಯಶಸ್ವಿಗೆ ಗ್ರಾಮಸ್ಥರ ಸಹಕಾರ ಬಯಸಿದ್ದರಲ್ಲದೆ,  ಗ್ರಾಮದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿ ತಯಾರಿಸಿದರು. ಇದೇ ಸಂದರ್ಭ ಜಾತ್ರೆಯೂ ಇರುವುದರಿಂದ ಪೊಲೀಸ್ ಬಂದೋಬಸ್ತ್ ಬಗ್ಗೆಯೂ ಎಸ್ಪಿ ಪರಿಶೀಲಿಸಿದರು.

ಈ ಸಂದರ್ಭ ಬೆಟ್ಟದತುಂಗ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪದ್ಮಮ್ಮ,  ತಹಸೀಲ್ದಾರ್ ರಂಗನಾಥ್, ಪೊಲೀಸ್ ವೃತ್ತ ನಿರೀಕ್ಷಕ ಪ್ರಸನ್ನಕುಮಾರ್, ಬೆಟ್ಟದಪುರ ಪೊಲೀಸ್ಠಾಣೆಯ ಉಪ ನಿರೀಕ್ಷಕ ಅನಿಲ್ ಕುಮಾರ್, ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಪ್ರಕಾಶ್, ಬಿಸಿಎಂ ಇಲಾಖೆಯ ಪ್ರಭಾರ ವಿಸ್ತರಣಾಧಿಕಾರಿ ಚಂದ್ರಶೇಖರ್, ಪಿಡಿಓ ಶೇಖರ್, ಉಪಾಧ್ಯಕ್ಷ ಸೋಮಶೇಖರ್ ಮೊದಲಾದವರಿದ್ದರು.

 

See also  ಆತಂಕ ಬಿಡಿ ನೆಮ್ಮದಿಯಿಂದ ಪರೀಕ್ಷೆ ಎದುರಿಸಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು