News Kannada
Thursday, March 30 2023

ಮೈಸೂರು

ಶೌಚಾಲಯಕ್ಕೆ ನೀರುಕೊಡಿ: ಬೀದಿಗಿಳಿದ ಮಹಾರಾಣಿ ವಿದ್ಯಾರ್ಥಿನಿಯರು

Photo Credit :

ಶೌಚಾಲಯಕ್ಕೆ ನೀರುಕೊಡಿ: ಬೀದಿಗಿಳಿದ ಮಹಾರಾಣಿ ವಿದ್ಯಾರ್ಥಿನಿಯರು

ಮೈಸೂರು: ಶವಾಚಾಲಯಕ್ಕೆ ನೀರಿಲ್ಲವೆಂದು ಬೀಗ ಜಡಿದು ತಿಂಗಳು ಕಳೆದರೂ ಶೌಚಾಲಯವಿಲ್ಲದೆ ಪರದಾಡುತ್ತಿದ್ದ ಮಹಾರಾಣಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಶೌಚಾಲಯಕ್ಕೆ ನೀರು ಕೊಡಿ ಎಂದು ಬೀದಿಗಿಳಿದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಘಟನೆ ಬುಧವಾರ ನಡೆದಿದೆ.


ಶತಮಾನದ ಸಂಭ್ರಮದಲ್ಲಿರುವ ಮೈಸೂರಿನ ಮಹಾರಾಣಿ ಮಹಿಳಾ ಕಾಲೇಜಿನಲ್ಲಿ ವಿಜ್ಞಾನ ವಿಭಾಗ, ಕಲಾ ವಿಭಾಗ ಹಾಗೂ ವಾಣಿಜ್ಯ ವಿಭಾಗದಲ್ಲಿ ಸುಮಾರು 8 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದು, ಇಲ್ಲಿ ಶೌಚಾಲಯಕ್ಕೆ ನೀರಿಲ್ಲದೆ ಬೀಗ ಜಡಿದು ತಿಂಗಳೇ ಕಳೆದಿದ್ದರೂ ಶೌಚಾಲಯವಿಲ್ಲದೆ ವಿದ್ಯಾರ್ಥಿನಿಯರ ಕಷ್ಟ ಕೇಳ ತೀರದಾಗಿದ್ದು ಈ ಬಗ್ಗೆ ಕಳೆದ ಮೂರು ವರ್ಷಗಳಿಂದಲೂ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದರು ಸರ್ಕಾರ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ.

ಕಳೆದ ಮೂರು ತಿಂಗಳ ಹಿಂದೆ ಮಹಾರಾಣಿ ಕಾಲೇಜಿನ ಪ್ರಾಂಶುಪಾಲರಿಗೆ ವಿದ್ಯಾರ್ಥಿನಿಯರ ವೇದಿಕೆ ಮನವಿ ಸಲ್ಲಿಸಿ ನಮಗೆ ಕಾಲೇಜಿನ ಶೌಚಾಲಯಕ್ಕೆ ಹಾಗೂ ಕುಡಿಯಲು ನೀರು ಒದಗಿಸಿಕೊಡಿ ಮನವಿ ಸಲ್ಲಿಸಿದ್ದರು ಕಾಲೇಜಿನ ಪ್ರಾಂಶುಪಾಲರು ಈ ಮನವಿಯನ್ನು ರಾಜ್ಯ ಸರ್ಕಾರಕ್ಕೆ ತಲುಪಿಸಿಯೇ ಇಲ್ಲ. ಇದನ್ನು ಪ್ರಶ್ನೆ ಮಾಡಿದರೆ ವಿದ್ಯಾರ್ಥಿನಿಯರಿಗೆ ಇಂಟರ್‍ನಲ್ ಮಾರ್ಕ್ಸ್ ಕಟ್ ಮಾಡುವುದಾಗಿ ಬೆದರಿಕೆ ಹಾಕುತ್ತಾರೆ.

ಇದರಿಂದ ಭಯಭೀತರಾದ ವಿದ್ಯಾರ್ಥಿಗಳು ಯಾವುದೇ ಸಮಸ್ಯೆ ಹೇಳಿಕೊಳ್ಳದೇ ಸುಮ್ಮನ್ನಿದ್ದರು. ಆದರೆ ಇಂದು ವಿದ್ಯಾರ್ಥಿ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ಶೀಘ್ರವೇ ಶೌಚಾಲಯಕ್ಕೆ ನೀರು ಒದಗಿಸಬೇಕು. ಇಲ್ಲದಿದ್ದರೆ ಕಾಲೇಜನ್ನು ಬಂದ್ ಮಾಡಿಸಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

See also  ಸಾಲ ಹೆಚ್ಚಾಗಿ ಪಾನ್ ಬ್ರೋಕರ್ ಆತ್ಮಹತ್ಯೆ: ಮನನೊಂದು ಪತ್ನಿಯೂ ಆತ್ಮಹತ್ಯೆಗೆ ಯತ್ನ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು