ಮೈಸೂರು: ಜೆಡಿಎಸ್ ನಗರಾಧ್ಯಕ್ಷ ಹಾಗೂ ಆರು ಬ್ಲಾಕ್ ಗಳ ಅಧ್ಯಕ್ಷರು ಶುಕ್ರವಾರ ಮೈಸೂರಿನ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಶಾಸಕ ಸಾರಾ ಮಹೇಶ್, ಮೇಯರ್ ರವಿಕುಮಾರ್ ಸಮ್ಮುಖದಲ್ಲಿ ಅಧಿಕಾರವನ್ನು ಸ್ವೀಕರಿಸಿದರು. ಜೆಡಿಎಸ್ ನಗರಾಧ್ಯಕ್ಷರಾಗಿ ಕೆ.ಹರೀಶ್ ಗೌಡ, ಕೃಷ್ಣರಾಜ ಬ್ಲಾಕ್ ನ ಅಧ್ಯಕ್ಷರಾಗಿ ಆರ್.ಎ.ರಾಧಾಕೃಷ್ಣ, ನಜೀರ್ ಸಾಬ್ ಬ್ಲಾಕ್ ನ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್, ಚಾಮರಾಜ ಬ್ಲಾಕ್ ನ ಅಧ್ಯಕ್ಷರಾಗಿ ಆರ್.ಎಲ್.ಅನಂತನಾರಾಯಣ, ನರಸಿಂಹರಾಜ ಬ್ಲಾಕ್ ನ ಅಧ್ಯಕ್ಷರಾಗಿ ಎಂ.ಎನ್.ರಾಮು, ಬಂಗಾರಪ್ಪ ಬ್ಲಾಕ್ ನ ಅಧ್ಯಕ್ಷರಾಗಿ ಸಂತೋಷ್, ಶಾಂತವೇರಿ ಗೋಪಾಲಗೌಡ ಬ್ಲಾಕ್ ನ ಅಧ್ಯಕ್ಷರಾಗಿ ಶ್ರೀನಿವಾಸ್ ಅಧಿಕಾರ ಸ್ವೀಕರಿಸಿದರು.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಬೃಹತ್ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಮಾಜಿ ಮೇಯರ್ ಸಂದೇಶ್ ಸ್ವಾಮಿ ಸೇರಿದಂತೆ ಜೆಡಿಎಸ್ ನ ಪಾಲಿಕೆ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.