ಮೈಸೂರು: ಶಾಲೆಯಲ್ಲಿ ನೂರು ರೂಪಾಯಿ ಹಣ ಕದ್ದ ಆರೋಪದಿಂದ ಮನನೊಂದ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಭೈರವೇಶ್ವರ ನಗರದ ಭೈರವೇಶ್ವರ ಶಾಲೆಯಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಪವನ್(12) ಎಂದು ಗುರುತಿಸಲಾಗಿದೆ. ಸಹಪಾಠಿಯ ಬಳಿ ಇದ್ದ ನೂರು ರೂಪಾಯಿಯನ್ನು ಪವನ್ ಕಳ್ಳತನ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಇದರಿಂದ ಮನನೊಂದ ಪವನ್ ಶಾಲಾ ಸಮವಸ್ತ್ರದಲ್ಲೇ ನೇಣಿಗೆ ಶರಣಾಗಿದ್ದಾನೆ. ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ