News Kannada
Thursday, March 23 2023

ಮೈಸೂರು

ಮೈಸೂರು ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಘಟಿಕೋತ್ಸವ ಸಮಾರಂಭ

Photo Credit :

 ಮೈಸೂರು ಸರ್ಕಾರಿ ಆಯುರ್ವೇದ  ವೈದ್ಯಕೀಯ ಕಾಲೇಜಿನಲ್ಲಿ ಘಟಿಕೋತ್ಸವ ಸಮಾರಂಭ

ಮೈಸೂರು: ನಗರದ ಜೆ.ಕೆ ಮೈದಾನದಲ್ಲಿರುವ ಮೈಸೂರು ಸರ್ಕಾರಿ ಆಯುರ್ವೇದ  ವೈದ್ಯಕೀಯ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ 2016-17ರ ಘಟಿಕೋತ್ಸವ ಸಮಾರಂಭ ಹಾಗೂ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸಮಾರಂಭದಲ್ಲಿ  ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಬಿ.ಕೃಷ್ಣಮೂರ್ತಿ ಮಾತನಾಡಿ   ವೈದ್ಯರು  ಮುಗುಳುನಗುತ್ತಾ ಚಿಕಿತ್ಸೆ ನೀಡಿದರೆ ಅರ್ಧ ಕಾಯಿಲೆ ವಾಸಿಯಾಗುತ್ತದೆ. ವಿವಿಧ ಕ್ಷೇತ್ರದ ಎಲ್ಲಾ ವೃತ್ತಿಗಳಿಗಿಂತಲೂ ವೈದ್ಯವೃತ್ತಿ ಶ್ರೇಷ್ಠವಾದುದು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿದಿನವೂ ನೂತನ ಆವಿಷ್ಕಾರ, ಸಂಶೋಧನೆಗಳಾಗುತ್ತವೆ. ವೈದ್ಯನಾದವನು ಪ್ರತಿದಿನವೂ ಹೊಸದನ್ನು ಕಲಿಯಬೇಕು. ತನ್ನಲ್ಲಿನ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಸಮಾಜವನ್ನು ರೋಗಮುಕ್ತಗೊಳಿಸಿ ಆರೋಗ್ಯಯುತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವೈದ್ಯರ ಪಾತ್ರ ಬಹಳ ಹಿರಿದು. ಕಾಯಿಲೆಯನ್ನು ಗುಣಪಡಿಸಿಕೊಳ್ಳಲು ಪ್ರತಿನಿತ್ಯ ನೂರಾರು ರೋಗಿಗಳು ಆಸ್ಪತ್ರೆಗೆ ಬರುತ್ತಾರೆ. ಅವರನ್ನು ಕಂಡಾಗ ಮುಗುಳುನಗೆ ಬೀರಿ ಪ್ರೀತಿಯಿಂದ ಮಾತನಾಡಿಸಿದರೆ ಔಷಧಿಯಿಲ್ಲದೆ ಅರ್ಧ ಕಾಯಿಲೆಯನ್ನು ಗುಣಪಡಿಸಬಹುದು. ಆಗ ರೋಗಿಯು ನೀವು ನೀಡುವ ಎಲ್ಲಾ ಸಲಹೆಗಳನ್ನು ಪಡೆದುಕೊಳ್ಳುತ್ತಾನೆ.

ಸರ್ಕಾರ ಒಬ್ಬ ವೈದ್ಯನಿಗೆ 10ರಿಂದ 20 ಲಕ್ಷ ಖರ್ಚು ಮಾಡುತ್ತಿದ್ದು, ವಿದ್ಯಾಭ್ಯಾಸ ಮುಗಿಸಿದ ಬಳಿಕ ಸಮಾಜದಿಂದ ಪಡೆದುಕೊಂಡಿದ್ದನ್ನು ಮರಳಿ ನೀಡಬೇಕು.ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಸಾವಿರ ಜನಸಂಖ್ಯೆಗೆ ಒಬ್ಬ ವೈದ್ಯನಿರಬೇಕು. ಆದರೆ ಭಾರತದಲ್ಲಿನ ಜನಸಂಖ್ಯೆ 120ಕೋಟಿ ಮೀರಿದ್ದು 1700 ಮಂದಿಗೆ ಒಬ್ಬ ವೈದ್ಯನಿದ್ದಾನೆ. ಹಾಗಾಗಿ ಇರುವ ಸೌಲಭ್ಯಗಳನ್ನೇ ಉತ್ತಮವಾಗಿ ಬಳಸಿಕೊಂಡು ಅತ್ಯುತ್ತಮ ಸೇವೆ ನೀಡಬೇಕು ಎಂದು ಸಲಹೆ ನೀಡಿದರು.

See also  ಇನ್ಮುಂದೆ ಬಂಡೀಪುರ ಅರಣ್ಯ ಸಿಬ್ಬಂದಿಗೆ ಸುಧಾರಿತ ವೈರ್ ಲೆಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು