ಮೈಸೂರು: ಭಾರತೀಯ ಪ್ರಜೆ ಮತ್ತು ನಿರಪರಾಧಿ ಕುಲಭೂಷಣ್ ಜಾದವ್ ಅವರಿಗೆ ಪಾಕಿಸ್ತಾನ ನ್ಯಾಯಾಲಯ ವಿಧಿಸಿರುವ ಗಲ್ಲು ಶಿಕ್ಷೆಯನ್ನು ವಿರೋಧಿಸಿ ಕರ್ನಾಟಕ ಪ್ರಜಾ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಿದರು.
ನಗರದ ನ್ಯಾಯಾಲಯದ ಎದುರು ಗಾಂಧಿ ಪ್ರತಿಮೆ ಮುಂಭಾಗ ಜಮಾಹಿಸಿದ ಪ್ರತಿಭಟನಾಕಾರರು ವಿವಿಧ ಘೋಷಣೆ ಕೂಗು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಸಂಚಾಲಕ ಕೃಷ್ಣೇಗೌಡ ಮಾತನಾಡಿ ಭಾರತದ ಪ್ರಜೆ ಕುಲಭೂಷಣ್ ಜಾದವ್ ಭಾರತೀಯ ಸೇನೆಯಲ್ಲಿ ಪ್ರಾಮಾಣಿಕ, ದಕ್ಷತೆ ಮತ್ತು ನಿಷ್ಠೆಯಿಂದ ಸೇವೆಯನ್ನು ಸಲ್ಲಿಸಿದ್ದಾರೆ. ಅಂತಹ ಒಂದು ಜವಾಬ್ದಾರಿಯುತ ಪ್ರಾಮಾಣಿಕ ವ್ಯಕ್ತಿಯ ಮೇಲೆ ಪಾಕಿಸ್ತಾನವು ಸುಳ್ಳು ಆಪಾದನೆ ಮಾಡಿ, ಕಾನೂನಿಗೆ ವಿರುದ್ಧವಾಗಿ ವಿಚಾರಣೆ ನಡೆಸಿ ಗಲ್ಲು ಶಿಕ್ಷೆ ನೀಡಿರುವುದು ಪಾಕಿಸ್ತಾನ ನ್ಯಾಯಾಂಗ ವ್ಯವಸ್ಥೆಗೆ ಖಂಡನೀಯ. ತೀಪರ್ು ಕಾನೂನಿಗೆ ವಿರುದ್ಧವಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಇದರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ನಂತರ ಅವರಿಗೆ ನ್ಯಾಯ ನೀಡಬೇಕೆಂದು ಒತ್ತಾಯಿಸಿದರು.
ನಂತರ ರಾಜ್ಯಾಧ್ಯಕ್ಷ ಬಿ.ಶಿವಣ್ಣ ಮಾತನಾಡಿದರು. ಪ್ರತಿಭಟನೆಯಲ್ಲಿ ಬಸವರಾಜು ಎಂ, ರುದ್ದಗೆರೆ ಶ್ರೀನಿವಾಸ್, ಮಹದೇವಸ್ವಾಮಿ ವಿ, ಮಂಜೇಗೌಡ, ಸಿ.ಡಿ.ಶಂಕರ್, ಗೋವಿಂದರಾಜು, , ತಾರಾ, ಸುಮಿತ್ರ, ದಾಕ್ಷಾಯಿಣಿ,ದಿನೇಶ್ ಗೌಡ, ಚಂದ್ರಕಾಂತ್, ಲೋಕೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.