News Kannada
Wednesday, March 29 2023

ಮೈಸೂರು

ಕಸದ ರಾಶಿಯಲ್ಲಿ ಮಾಜಿ ಸಿಎಂ ಫೋಟೋ!

Photo Credit :

ಕಸದ ರಾಶಿಯಲ್ಲಿ ಮಾಜಿ ಸಿಎಂ ಫೋಟೋ!

ಮೈಸೂರು: ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಹಾಗೂ ಮಾಜಿ ಸಂಸದ ಹೆಚ್.ವಿಶ್ವನಾಥ್ ಭಾವಚಿತ್ರಗಳನ್ನು ಕಸದ ರಾಶಿಗೆ ಎಸೆದು ಮೈಸೂರು ಜಿಲ್ಲಾ ಪಂಚಾಯತಿ ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಧರಂಸಿಂಗ್ ಹಾಗೂ ಸಚಿವ ಮತ್ತು ಸಂಸದರಾಗಿ ಆಡಳಿತ ನಡೆಸಿದ ಹೆಚ್.ವಿಶ್ವನಾಥ್ ಅವರ ಭಾವಚಿತ್ರಗಳನ್ನು ಹೊರಹಾಕಿ ಅಪಮಾನ ಮಾಡಲಾಗಿದೆ. ಜಿ.ಪಂ.ನಲ್ಲಿ ಜೆಡಿಎಸ್ ಅಧಿಕಾರದ ಗದ್ದುಗೆಯಲ್ಲಿರುವುದರಿಂದ ಇಂತಹ ಅಚಾತುರ್ಯಗಳು ನಡೆದಿದೆಯೇ ಎಂಬ ಅನುಮಾನ ಕಾಂಗ್ರೆಸ್ ಕಾರ್ಯಕರ್ತರಿಗೆ ಮೂಡಿದೆ.

ಅಲ್ಲದೆ ಮಂಗಳವಾರ ಜಿ.ಪಂನಲ್ಲಿ ಅಧ್ಯಕ್ಷೆ ನಯೀಮಾ ಸುಲ್ತಾನ್ ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ ಮಂಡನೆ ನಂತರ ಕಾಂಗ್ರೆಸ್ ಪಕ್ಷದ ಸದಸ್ಯರು ಜಿ.ಪಂ ಅಧಿಕಾರಿಗಳನ್ನು ಹಾಗೂ ಜೆಡಿಎಸ್ ಸದಸ್ಯರನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಮಾಜಿ ಸಂಸದ ಹೆಚ್. ವಿಶ್ವನಾಥ್ ರ ಮಗ ಅಮಿತ್ ದೇವರಹಟ್ಟಿ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

See also  ವಕೀಲರಿಂದ ಪ್ರತಿಭಟನೆ: ಮೈಸೂರು ನ್ಯಾಯಾಲಯಕ್ಕೆ ಬಿಗಿ ಭದ್ರತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು