News Kannada
Monday, March 27 2023

ಮೈಸೂರು

ಅರಕಲಗೂಡಲ್ಲಿ ಮಗಳೊಂದಿಗೆ ದಂಪತಿ ವಿಷ ಸೇವಿಸಿ ಆತ್ಮಹತ್ಯೆ

Photo Credit :

ಅರಕಲಗೂಡಲ್ಲಿ ಮಗಳೊಂದಿಗೆ ದಂಪತಿ ವಿಷ ಸೇವಿಸಿ ಆತ್ಮಹತ್ಯೆ

ಹಾಸನ: ಕುಟುಂಬದ ಮಾನ ಮರ್ಯಾದೆಗೆ ಅಂಜಿ ಮಗಳೊಂದಿಗೆ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಕಲಗೂಡು ತಾಲೂಕಿನ ದೊಡ್ಡನಾಯಕ ಕೊಪ್ಪಲಿನಲ್ಲಿ ನಡೆದಿದೆ.

ದೊಡ್ಡನಾಯಕನಕೊಪ್ಪಲು ಗ್ರಾಮದ ನಿವಾಸಿ ಕೃಷ್ಣ(55), ಪತ್ನಿ ನಂಜಮ್ಮ(50) ಪುತ್ರಿ ಭೂಮಿಕಾ(22) ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಗ್ರಾಮದ ನಾಗರಾಜು ಹಾಗೂ ಅಡಿಕೆ ಬೊಮ್ಮನಹಳ್ಳಿ ಗ್ರಾಮದ ಶ್ರೀಧರ್ ಎಂಬಿಬ್ಬರ ನಡುವೆ ಜಗಳವಾಗಿ ನಾಗರಾಜು ಕೊಲೆಯಾಗಿದ್ದನು. ಈ ವಿಚಾರಕ್ಕೆ ಸಂಬಂಧಿದಂತೆ ಕೊಲೆಯಲ್ಲಿ ಕೃಷ್ಣ ಅವರ ಪುತ್ರ ಲೋಕೇಶನ ಕೈವಾಡವಿದೆ ಎಂದು ಮೃತನ ಮನೆಯವರು ಆರೋಪಿಸಿದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದರು.

ಜತೆಗೆ ಆರೋಪ ಸಾಬೀತಾದರೆ ನಿಮ್ಮ ಮನೆಯವರನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದರು. ಬೆದರಿಕೆ ಮತ್ತು ಕೊಲೆ ಪ್ರಕರಣದಲ್ಲಿ ತಮ್ಮ ಮಗನನ್ನು ಪೊಲೀಸರು ಬಂಧಿಸಿ ವಿಚಾರಣೆ ಮಾಡಿದ್ದರಿಂದ ಕುಟುಂಬದ ಮಾನವೇ ಹೋಯಿತೆಂದು ಊಟದಲ್ಲಿ ವಿಷ ಬೆರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

See also  ಮೈನವಿರೇಳಿಸಿದ ರಾಜ್ಯಮಟ್ಟದ ಎತ್ತಿನಗಾಡಿ ಓಟದ ಸ್ಪರ್ಧೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು