News Kannada
Thursday, March 23 2023

ಮೈಸೂರು

ಬೆಂಬಲ ನೀಡುವ ಕುರಿತು ಇನ್ನೆರಡು ದಿನದಲ್ಲಿ ತೀರ್ಮಾನ: ಹೆಚ್ಡಿಕೆ

Photo Credit :

ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲಿ ಯಾರಿಗೆ ಬೆಂಬಲ ನೀಡಬೇಕು ಎಂಬುದರ ಬಗ್ಗೆ ಇನ್ನೆರಡು ದಿನದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ನಾವು ಸ್ಪರ್ಧಿಸಿರುವ 6 ಕ್ಷೇತ್ರಗಳಲ್ಲಿ ಯಾರ ಬೆಂಬಲವನ್ನೂ ಕೇಳುವುದಿಲ್ಲ. ಅವರ ಅಭ್ಯರ್ಥಿ ಸೋಲಿಸಿ ನಮಗೆ ಬೆಂಬಲ ಕೊಡಿ ಎನ್ನಲು ಸಾಧ್ಯವಿಲ್ಲ. ಆರು ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಇದೆ. ಆದರೆ, ನಾವು ಸ್ಪರ್ಧೆ ಮಾಡದ ಕ್ಷೇತ್ರದಲ್ಲಿ ಯಾರಿಗೆ ಬೆಂಬಲ ಕೊಡಬೇಕು ಎಂದು ಎರಡು ದಿನದಲ್ಲಿ ತೀರ್ಮಾನಿಸಲಾಗುತ್ತದೆ. ಮುಂದಿನ 2023ರ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಬೆಂಬಲ ನೀಡುತ್ತೇವೆ ಎಂದು ತಿಳಿಸಿದರು.

ಜೆಡಿಎಸ್ ಅಲ್ಲ ಜೆಡಿಎಫ್ ಪಕ್ಷ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರಿಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅವರ ಮಗ ಶಾಸಕರಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಕುಟುಂಬದ ನಾಲ್ವರು ರಾಜಕಾರಣದಲ್ಲಿದ್ದಾರೆ. ಸಿದ್ದರಾಮಯ್ಯ ಮಗ ಅಕಾಲಿಕ ಮರಣಕ್ಕೀಡಾದರೂ ಅವರು ಸಹಾ ಸಕ್ರಿಯ ರಾಜಕಾರಣದಲ್ಲಿದ್ದರು. ರಾಜ್ಯ ರಾಷ್ಟ್ರಕಾರಣದಲ್ಲಿ ಹಲವರು ಈ ರೀತಿ ಇದ್ದಾರೆ. ಬಿಜೆಪಿ ಕಾಂಗ್ರೆಸ್ ಪಕ್ಷದವರು ಇದಕ್ಕೆ ಕಾನೂನು ಜಾರಿ ಮಾಡಲಿ. ತಮ್ಮ ಸಾಮರ್ಥ್ಯದಿಂದ ಸಂವಿಧಾನ ತಿದ್ದುಪಡಿ ಮಾಡಲಿ. ಕುಟುಂಬದ ಎಷ್ಟು ಜನ ರಾಜಕಾರಣಕ್ಕೆ ಬರಬೇಕು ಎಂಬ ನಿಯಮ ರೂಪಿಸಲಿ ಎಂದು ತಿರುಗೇಟು ನೀಡಿದರು.

ಜೆಡಿಎಸ್ ಬಿಜೆಪಿಯ ಬಿ ಟೀಂ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ತಮ್ಮ ಬಾಯಿಗೆ ಏಕೆ ಶ್ರಮ ಕೊಡುತ್ತಿದ್ದಾರೆ. ಅವರು ಈ ರೀತಿಯ ಹೇಳಿಕೆಯ ಸ್ಲೇಟನ್ನು ಕುತ್ತಿಗೆಗೆ ಹಾಕಿಕೊಳ್ಳಲಿ. ಸುಮ್ಮನೆ ಪದೇ ಪದೇ ಈ ರೀತಿ ಹೇಳಿ ಏಕೆ ಬಾಯಿ ನೋಯಿಸಿಕೊಳ್ಳಬೇಕು. 2018ರಿಂದ ಇದೇ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇದು ಸಿದ್ದರಾಮಯ್ಯ ಅವರಿಗೆ ತಿರುಗುಬಾಣವಾಗಲಿದೆ. ಇದರ ಪರಿಣಾಮ 2023ರಲ್ಲಿ ಜೆಡಿಎಸ್‌ಗೆ ಲಾಭವಾಗಲಿದ್ದು, ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್‌ಗೆ ಅನುಕೂಲವಾಗಲಿದೆ. ಬಿಜೆಪಿಯ ಅನುಕಂಪದ ಮತ ಜೆಡಿಎಸ್‌ಗೆ ಬರಲಿದೆ ಎಂದರು.

See also    ನಾಗರಹೊಳೆ ಕಾಡಂಚಿನ ಗ್ರಾಮದಲ್ಲಿ ಕಾಡಾನೆಗಳ ಉಪಟಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು