ಮೈಸೂರು: ಪೊಲೀಸರಿಂದ ತಪ್ಪಿಸಿ ಕೊಳ್ಳಲು ಹೋಗಿ ರಸ್ತೆ ಅಪಘಾತವಾಗಿದ್ದು, ಇಬ್ಬರು ಯುವಕರು ಸ್ಥಳದಲ್ಲಿ ಸಾವನಪ್ಪಿದ್ದು, ಓರ್ವ ಯುವಕನ ಸ್ಥಿತಿ ಗಂಭೀರವಾಗಿದೆ.
ಮೈಸೂರಿನ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ತ್ರಿಬಲ್ ರೈಡಿಂಗ್ ನಲ್ಲಿ ಮೂವರು ಯುವಕರು ಸಾಗುತ್ತಿದ್ದರು.
ಕೂಡ್ಲಾಪುರದ ಸಚಿನ್, ಉತ್ತನಹಳ್ಳಿಯ ದೊರೆಸ್ವಾಮಿ ಸಾವನಪ್ಪಿದ್ದಾನೆ. ನಂಜನಗೂಡಿನ ಸಿಂಧುವಳ್ಳಿ ಬಳಿಯ ಹುಣಸನಾಳು ಗ್ರಾಮಕ್ಕೆ ತೆರಳುವಾಗ ಘಟನೆ ನಡೆದಿದ್ದು, ತ್ರಿಬಲ್ ರೈಡಿಂಗ್ ನಲ್ಲಿ ಯುವಕರು ಹೋಗುತ್ತಿದ್ದರು,ಇ ವೇಳೆ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರನ್ನ ಕಂಡು ಹಿಂದಕ್ಕೆ ಹೋಗಲು ಯತ್ನಿಸಿದ್ದಾರೆ. ಆತುರದಲ್ಲಿ ಯು ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ.