News Kannada
Friday, September 29 2023
ಮೈಸೂರು

ಮೈಸೂರು: ಸಂಗೀತ ಸಾಧಕರಿಗೆ ‘ಸಂಗೀತ ಕಲಾಸಾರಥಿ’ ಪ್ರಶಸ್ತಿ ವಿತರಣೆ

Untitled 1 56
Photo Credit :

ಮೈಸೂರು: ನಗರದ ಕೆ ಎನ್ ಅಗ್ರಹಾರ, ಕೆ ಆರ್ ಮೊಹಲ್ಲಾ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿಶ್ವ ಸಂಗೀತ ದಿನಾಚರಣೆ ಅಂಗವಾಗಿ ಸಂಗೀತ ಕ್ಷೇತ್ರದ ಸಾಧಕರಿಗೆ ಸಂಗೀತ  ಕಲಾಸಾರಥಿ ಪ್ರಶಸ್ತಿ  ನೀಡಲಾಗುತ್ತಿದೆ. ಈ ಸಂಬಂಧ ಪ್ರಶಸ್ತಿ ಪ್ರದಾನ ಸಮಾರಂಭ ಜೂನ್ 22ರಂದು ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತನಿಧಿ ಕೇಂದ್ರದ ಆವರಣದಲ್ಲಿ ನಡೆಯಲಿದೆ.

ಈ ವೇಳೆ ಕಲಾಸಾರಥಿ ಪ್ರಶಸ್ತಿಯನ್ನು ಡಾ. ದೀಪಿಕಾ ಪಾಂಡುರಂಗಿ,  ವಿದ್ವಾನ್  ಆರ್ ಕೆ ಪದ್ಮನಾಭ,  ವಿದುಷಿ  ಸಿ.ಎಸ್.ನಾಗರತ್ನ,  ವಿದ್ವಾನ್ ವಿ.ಎಸ್. ರಮೇಶ್,  ವಿದ್ವಾನ್ ಹೆಚ್.ಪಿ. ಕಿರಣ್, ವಿದ್ವಾನ್ ಯಧುಕುಮಾರ್, ಅವರಿಗೆ ಪ್ರದಾನ ಮಾಡಲಾಗುತ್ತಿದೆ.

ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ  ಇಳೈ ಆಳ್ವಾರ್ ಸ್ವಾಮೀಜಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್, ಕನ್ನಡ ಸಾಹಿತ್ಯ ಪರಿಷತ್ ನ ನಿಕಟಪೂರ್ವ ಅಧ್ಯಕ್ಷ ವೈ ಡಿ ರಾಜಣ್ಣ, ಬಿಜೆಪಿ ಮುಖಂಡರಾದ ಬಿ.ಪಿ.ಮಂಜುನಾಥ್, ಹಿರಿಯ ಸಮಾಜ ಸೇವಕ  ಕೆ ರಘುರಾಂ ವಾಜಪೇಯಿ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್, ಕಾಂಗ್ರೆಸ್ ಯುವ ಮುಖಂಡ ಎನ್ ಎಂ  ನವೀನ್ ಕುಮಾರ್, ಪ್ರಸಾದ್ ಸ್ಕೂಲ್ ಆಫ್ ರಿದಮ್ ಸಂಸ್ಥೆಯ ಮುಖ್ಯಸ್ಥರಾದ ರಾಘವೇಂದ್ರ ಪ್ರಸಾದ್, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜು  ಬಸಪ್ಪ, ಯುವ ಮುಖಂಡ ಅಜಯ್ ಶಾಸ್ತ್ರಿ ಮೊದಲಾದವರು ಭಾಗವಹಿಸಲಿದ್ದಾರೆ.

See also  ಕಬಿನಿ ಜಲಾಶಾಯ ಬಹುತೇಕ ಭರ್ತಿ.... ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು