News Kannada
Thursday, October 05 2023
ಮೈಸೂರು

ಮೈಸೂರು: ಮೋದಿ  ವಿರುದ್ಧ ಮುಖ್ಯಮಂತ್ರಿ ಚಂದ್ರು ವಾಗ್ದಾಳಿ

Chief Minister Chandru attacked Prime Minister Narendra Modi
Photo Credit :

ಮೈಸೂರು: ಕೇಂದ್ರ ಬಿಜೆಪಿ ಸರ್ಕಾರ ತನ್ನ ಸರ್ವಾಧಿಕಾರಿ ಧೋರಣೆ ತಾಳುತ್ತಿದ್ದು ಪ್ರಧಾನಿ ಮೋದಿ ನೀತಿ ಹಿಟ್ಲರ್ ನೀತಿಗಿಂತಲೂ ಕ್ರೂರವಾಗಿದೆ ಎಂದು ಆಮ್ ಆದ್ಮಿ ಪಕ್ಷದ ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯಸ್ಥ ಮುಖ್ಯಮಂತ್ರಿ ಚಂದ್ರು ವಾಗ್ದಾಳಿ ನಡೆಸಿದ್ದಾರೆ.

ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಆಯೋಜಿಸಿದ್ದ ಆಮ್ ಆದ್ಮಿ ಪಕ್ಷದ ಜಿಲ್ಲಾ ಕಾರ್ಯಕರ್ತರ ಸಮಾವೇಶ ಹಾಗೂ ಗ್ರಾಮ ಸಂಪರ್ಕ ಅಭಿಯಾನದಲ್ಲಿ ಮಾತನಾಡಿದ ಅವರು, ಕೇಂದ್ರದ ಮೋದಿ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಕೈಬಿಟ್ಟು ಜನರ ಧಾರ್ಮಿಕ ಭಾವನೆಗಳಾದ ರಾಮ ಉತ್ಸವ, ಧಾರ್ಮಿಕ ಆಚರಣೆ ಮತ್ತು ಕೋಮುವಾದದಂತಹ ವಿಚಾರಗಳನ್ನು ಮುನ್ನೆಲೆಗೆ ತಂದು ಧರ್ಮಾಧಾರಿತ ಆಡಳಿತ ನೀತಿ ಅನುಸರಿಸುತ್ತಿದೆ. ಸಾಮಾನ್ಯವಾಗಿ ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಆಡಳಿತದಲ್ಲಿದ್ದರೆ ಆ ರಾಜ್ಯ ಸಾಕಷ್ಟು  ಅಭಿವೃದ್ಧಿಯಾಗುತ್ತದೆ ಎಂದು ಹೇಳಲಾಗುತ್ತದೆ. ಆದರೆ, ಆ ಮಾತು ಅಕ್ಷರಶಃ ಸುಳ್ಳು ಎಂಬುದನ್ನು ಇಂದು ಆಳ್ವಿಕೆ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಸಾಬೀತುಪಡಿಸಿದೆ ಎಂದು ಟೀಕಿಸಿದರು.

ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷವಾಗುತ್ತಿದ್ದರೂ ಮೂಲ ಅವಶ್ಯಕತೆಗಳಾದ ಆಹಾರ, ನೀರು, ರಸ್ತೆ, ಆರೋಗ್ಯ ಮತ್ತು ಶಿಕ್ಷಣದಂತಹ ಕನಿಷ್ಠ ಮೂಲ ಸೌಕರ್ಯಗಳಿಲ್ಲದೆ ಜನರು ಕಂಗಾಲಾಗಿದ್ದಾರೆ. ರಾಜ್ಯದಲ್ಲಿ 10.46 ಲಕ್ಷ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದರೂ, ಶೂ ಮತ್ತು ಸೈಕಲ್‌ಗಾಗಿ ಮಕ್ಕಳು ಶಾಲೆಗೆ ಬರುವುದಿಲ್ಲ ಎಂದು ಶಿಕ್ಷಣ ಸಚಿವ ನಾಗೇಶ್ ಉಡಾಫೆ ಹೇಳಿಕೆ ನೀಡುತ್ತಾರೆ ಎಂದು ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು.

ದೆಹಲಿಯಲ್ಲಿ ಮೊಹಲ್ಲಾ ಕ್ಲಿನಿಕ್ ಮೂಲಕ ಉಚಿತ ಆರೋಗ್ಯ ಹಾಗೂ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇದರಿಂದ ಸಂತಸಗೊಂಡ ಜನರು ಪಂಜಾಬ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿ ಆಮ್ ಆದ್ಮಿ ಪಕ್ಷಕ್ಕೆ ಅಧಿಕಾರ ನೀಡಿದರು. ಈ ಜೆಡಿಸ್, ಕಾಂಗ್ರೆಸ್ ಮತ್ತು ಬಿಜೆಪಿ ಎಂಬ ಜೆಸಿಬಿ ಪಕ್ಷಗಳ ಅಧಿಕಾರ ಮತ್ತು ಭ್ರಷ್ಟಾಚಾರ ದಾಹಕ್ಕೆ ನಮ್ಮ ರಾಜ್ಯದ ಖಜಾನೆ ಬರಿದಾಗುತ್ತಿದೆಯೇ ವಿನಹ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಹೇಳಿದರು.

ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಜಿಲ್ಲಾ ಅಧ್ಯಕ್ಷೆ ಮಾಳವಿಕ ಗುಬ್ಬಿವಾಣಿ, ದರ್ಶನ್ ಜೈನ್, ಧರ್ಮಶ್ರೀ ಹಾಗೂ ಅಬ್ದುಲ್ ರಜಾಕ್ ಹಾಜರಿದ್ದರು.

See also  ನಕಲಿ ದಾಖಲಾತಿ ಸೃಷ್ಟಿಸಿ ನಿವೇಶನ ಮಾರಾಟ: ಮೂವರು ಅರೆಸ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು