News Kannada
Wednesday, May 31 2023
ಮೈಸೂರು

ಮೈಸೂರು: ಕಳಂಕದಿಂದ ಮುಕ್ತನಾಗಿದ್ದೇನೆ ಎಂದ ಈಶ್ವರಪ್ಪ

Unable to tolerate the Hindu community, miscreants indulged in violence
Photo Credit : By Author

ಮೈಸೂರು:  ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕಳಂಕದಿಂದ ಮುಕ್ತವಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕುಟುಂಬ ಸಮೇತ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದರು

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಮುಕ್ತನಾಗಿದ್ದೇನೆ. ನನ್ನದೇನೂ ತಪ್ಪಿಲ್ಲದಿದ್ದರೂ ಸಚಿವ ಸ್ಥಾನಕ್ಕೆ ರಾಜೀನಾಮೆ  ಕೊಟ್ಟಿದ್ದೆ. ಈಗ ಸತ್ಯಕ್ಕೆ ಜಯ ಸಿಕ್ಕಿದೆ. ಈ ಪ್ರಕರಣದಿಂದ ಆರೋಪ ಮುಕ್ತನಾಗಿ ಬರುತ್ತೇನೆಂದು ಆರಂಭದಲ್ಲೇ ಗೊತ್ತಿತ್ತು. ಏಕೆಂದರೆ, ನಾನ್ಯಾವ ತಪ್ಪನ್ನೂ ಮಾಡಿರಲಿಲ್ಲ. ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಟ್ಟಿದ್ದೆ. ಪಕ್ಷಕ್ಕೆ ಆಗಿದ್ದ ಮುಜುಗರವೂ ಈಗ ನಿವಾರಣೆ ಆದಂತಾಗಿದೆ. ನನ್ನನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು, ಬಿಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಹೇಳಿದರು.

ಪೊಲೀಸರು ಬಿ ರಿಪೋರ್ಟ್ ಹಾಕಿದ ಮೇಲೂ ಕಾಂಗ್ರೆಸ್ ನಾಯಕರು ಪ್ರಕರಣದಲ್ಲಿ ನನ್ನ ಬಗ್ಗೆ ಟೀಕೆ ಮಾಡುತ್ತಿರುವುದು ಬೇಸರ ತರಿಸಿದೆ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರಿಗೆ  ಪ್ರಕರಣದ ತನಿಖೆಗಳು ಹೇಗೆ ನಡೆಯುತ್ತವೆ ಎಂಬುದು ಗೊತ್ತಿದ್ದರೂ ಬಿ ರಿಪೋರ್ಟ್ ಬಗ್ಗೆ ಅನುಮಾನ ವ್ಯಕ್ತಪಡಿಸಿರುವುದು ಬೇಸರ ಮೂಡಿಸಿದೆ. ಅವರು ಕಾನೂನು ಪಂಡಿತ ಆಗಿದ್ದರೂ ಸುಮ್ಮನೆ ಟೀಕೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

See also  ದೆಹಲಿ: ಅಕ್ರಮ ಶಸ್ತ್ರಾಸ್ತ್ರ ಪೂರೈಕೆ ಜಾಲದ ಇಬ್ಬರು ಸದಸ್ಯರನ್ನು ಬಂಧಿಸಿದ ವಿಶೇಷ ಪೊಲೀಸ್ ಘಟಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು