News Kannada
Sunday, December 10 2023
ಮೈಸೂರು

ಮೈಸೂರು: ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳೆಂದು ಭಾವಿಸಬೇಕು ಎಂದ ತುಳಸಿ ಮದ್ದಿನೇನಿ

Tulsi Maddineni said that students should be treated as their children.
Photo Credit : By Author

ಮೈಸೂರು: ನಿಲಯಪಾಲಕರು, ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳೆಂದು ಭಾವಿಸಿ ಅವರಿಗೆ ನ್ಯಾಯ ದೊರಕಿಸಿ ಕೊಡುವಂತಹ ಕೆಲಸವನ್ನು ಮಾಡಬೇಕೆಂದು ಬಿ.ಸಿ.ಎಂ. ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಳಸಿ ಮದ್ದಿನೇನಿ ತಿಳಿಸಿದರು.

ಮೈಸೂರು ತಾಲ್ಲೂಕು ಮತ್ತು ಕೆ.ಆರ್. ನಗರ ತಾಲ್ಲೂಕಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಹಾಸ್ಟೆಲ್‌ಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಬೇಕು. ಗುಣಮಟ್ಟದ ಆಹಾರವನ್ನು ನೀಡಬೇಕು ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ಹಾಕಬೇಕು. ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ಮತ್ತು ಸ್ಪೋಕನ್ ಇಂಗ್ಲಿಷ್ ತರಗತಿಗಳು ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು, ವಿದ್ಯಾರ್ಥಿಗಳು ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ನಿಮ್ಮ ನಿರ್ದಿಷ್ಟ ಗುರಿಯನ್ನು ತಲುಪಿ ಇಲಾಖೆಗೆ ನಿಮ್ಮ ತಂದೆ ತಾಯಿಗೆ ಒಳ್ಳೆಯ ಹೆಸರನ್ನು ತರಬೇಕೆಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಕೆ.ಆರ್.ನಗರದ ಬಸವಭವನ ಕಾಮಗಾರಿಯನ್ನು ಪರಿಶೀಲಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ  ಅಧಿಕಾರಿ ಜಿ.ಆರ್. ಮಹೇಶ್, ಮೈಸೂರು ತಾಲ್ಲೂಕು ಕಲ್ಯಾಣಾಧಿಕಾರಿ ಚಂದ್ರಕಲಾ, ಕೆ.ಆರ್. ನಗರ ತಾಲ್ಲೂಕು, ಕಲ್ಯಾಣಾಧಿಕಾರಿ ಮಹೇಶ್, ರಮ್ಯ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅಡಗೂರು ಚೆನ್ನಬಸಪ್ಪ ಹಾಜರಿದ್ದರು.

See also  ಪರೀಕ್ಷಾ ಕೇಂದ್ರದಲ್ಲೇ ಅರೆಬೆತ್ತಳಾದ ವಿದ್ಯಾರ್ಥಿಗಳು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು