News Kannada
Sunday, June 04 2023
ಮೈಸೂರು

ಮೈಸೂರು: ರಸ್ತೆ ಅಪಘಾತಗಳ ಕುರಿತು ಜಾಗೃತಿ ಅಗತ್ಯ ಎಂದ ಡಾ.ಕೆ ವಿ ರಾಜೇಂದ್ರ

Dr. K.V. Rajendra said that awareness on road accidents is essential.
Photo Credit : By Author

ಮೈಸೂರು: ರಸ್ತೆ ಪರಿಸ್ಥಿತಿ ಸುಧಾರಿಸುತ್ತಿದ್ದಂತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ ಆದ್ದರಿಂದ ಜನರಲ್ಲಿ ರಸ್ತೆ ಅಪಘಾತಗಳ ಬಗ್ಗೆ ಮಾಹಿತಿಯನ್ನು ಮತ್ತು ಜಾಗೃತಿಯನ್ನು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ ವಿ ರಾಜೇಂದ್ರ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ತಿಂಗಳಲ್ಲಿ 9 ಮಾರಣಾಂತಿಕ ಅಪಘಾತಗಳು ನಡೆದಿದ್ದು ಇವುಗಳಿಗೆ ಸೂಕ್ತವಾದ ಕಾರಣವನ್ನು ಮತ್ತು ಪರಿಹಾರ ಕ್ರಮಗಳ ಬಗ್ಗೆ ಸಮಿತಿ ಮಾಹಿತಿ ನೀಡಬೇಕು. ಉತ್ತಮವಾಗಿಲ್ಲದ ರಸ್ತೆಗಳು, ಕುಡಿದು ಗಾಡಿ ಓಡಿಸುವುದು, ಸೀಟ್ ಬೆಲ್ಟ್ ಹಾಕದಿರುವುದು, ಸ್ಪೀಡ್ ಡ್ರೈವಿಂಗ್, ವಾಹನ ಚಲಾಯಿಸುವಾಗ ಮೊಬೈಲ್ ಬಳಕೆ ಮಾಡುವುದು, ಗುಣಮಟ್ಟದ ಹೆಲ್ಮೆಟ್ ಧರಿಸದೆ ಇರುವುದು ಮತ್ತು ಸರಿಯಾದ ರೀತಿಯಲ್ಲಿ ಹೆಲ್ಮೆಟ್ ಧರಿಸದೇ ಇರುವುದರಿಂದ ಅಪಘಾತಗಳಾಗುವ ಸಾಧ್ಯತೆ ಹೆಚ್ಚಿವೆ. ಆದ್ದರಿಂದ ಸಂಭವಿಸಿರುವ ಅಪಘಾತಗಳಲ್ಲಿ ಯಾವ ಕಾರಣದಿಂದ ಹೆಚ್ಚು ಅಪಘಾತಗಳಾಗುತ್ತಿವೆ ಎಂಬುದರ ಬಗ್ಗೆ ಸೂಕ್ತ ವರದಿಯನ್ನು ಮತ್ತು ಅವುಗಳನ್ನು ತಡೆಗಟ್ಟಲು ಕೈಗೊಂಡಿರುವ ಪರಿಹಾರ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡುವಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಈ ಕುರಿತು 15 ದಿನಕ್ಕೊಮ್ಮೆ ಜೂಮ್ ಮೀಟಿಂಗ್ ಮಾಡಬೇಕು. ಪ್ರತಿ ತಿಂಗಳು ನಡೆಯುವ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಗೆ ತಪ್ಪದೇ ಹಾಜರಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿ, ಸಭೆಗೆ ಹಾಜರಾಗದ ಇತರ ಇಲಾಖೆಯ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡುವಂತೆ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ರಾಜು ರವರಿಗೆ ಆದೇಶಿಸಿದರು.

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕರಾದ ಬಿ ಟಿ ಶ್ರೀಧರ, ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಎಮ್.ಎಸ್ ರಾಜೇಂದ್ರ ಕುಮಾರ್, ಹುಣಸೂರು ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಪೋಲಿಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

See also  ತನ್ವೀರ್ ಸೇಠ್ ಯಾವುದೇ ತಪ್ಪು ಮಾಡಿಲ್ಲ: ಟವರ್ ಏರಿ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು