News Kannada
Thursday, March 23 2023

ಮೈಸೂರು

ನಂಜನಗೂಡು: ವರ್ಗಾವಣೆಗೊಂಡ ಪ್ರಾಂಶುಪಾಲರೇ ಬೇಕೆಂದು ಪಟ್ಟು ಹಿಡಿದ ವಿದ್ಯಾರ್ಥಿಗಳು

Students demand transfer of principal
Photo Credit : News Kannada

ನಂಜನಗೂಡು: ತಾಲೂಕಿನ ತಗಡೂರು ಗ್ರಾಮದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವರ್ಗಾವಣೆಗೊಂಡ ಪ್ರಾಂಶುಪಾಲರೇ ಬೇಕೆಂದು ಪಟ್ಟು ಹಿಡಿದು ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ಮಾಡಿ ಬೃಹತ್ ಪ್ರತಿಭಟನೆ ನಡೆಸಿದರು.

ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರು ಎಂಬುವವರನ್ನು ಸರ್ಕಾರ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು ಬೆಳಗಿನ ಉಪಹಾರವನ್ನು ಸೇವಿಸದೆ ವಸತಿ ಶಾಲೆ ಮತ್ತು ಕಾಲೇಜಿನ ಗೇಟ್ ಮುಂಭಾಗದಲ್ಲಿ ಜಮಾಯಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಜಾನವಿ ಮಾತನಾಡಿ, ಏಳು ತಿಂಗಳ ಹಿಂದಷ್ಟೇ ಪ್ರಾಂಶುಪಾಲರಾಗಿ ಚಂದ್ರು ಅವರು ಬಂದಿದ್ದರು. ಆದರೆ ಏಕಾಏಕಿ ಅವರನ್ನು ಬೇರೊಂದು ಕಾಲೇಜಿಗೆ ವರ್ಗಾವಣೆ ಮಾಡಿದ್ದಾರೆ. ಇದರಿಂದ ನಮಗೆ ತುಂಬಾ ನೋವುಂಟಾಗಿದೆ. ಶಾಲಾ ಮತ್ತು ಕಾಲೇಜಿನ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಶಿಕ್ಷಣದಲ್ಲಿ ಪ್ರತಿಯೊಬ್ಬ ಮಕ್ಕಳಿಗೂ ಮಾರ್ಗದರ್ಶನ ನೀಡಿ ನಮಗೆ ದಾರಿದೀಪವಾಗಿದ್ದರು. ಇಡೀ ಜಿಲ್ಲೆಯಲ್ಲಿ ತಗಡೂರು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜನ್ನು ಗುರುತಿಸುವಂತೆ ಮಾಡಿದ್ದಾರೆ ಹಾಗೂ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆ ಸೇರಿದಂತೆ ಫಲಿತಾಂಶದಲ್ಲೂ ಕೂಡ ಉತ್ತಮ ಸಾಧನೆಯನ್ನು ಮಾಡಿದೆ ಪರೀಕ್ಷೆಯ ಸಂದರ್ಭದಲ್ಲಿ ಅವರನ್ನು ವರ್ಗಾವಣೆ ಮಾಡಿರುವುದು ಅತ್ಯಂತ ಖಂಡನೀಯ. ಮತ್ತೆ ಪ್ರಾಂಶುಪಾಲರನ್ನು ನಮ್ಮ ಶಾಲೆಗೆ ಹಾಕಬೇಕು ಇಲ್ಲವಾದಲ್ಲಿ ನಾವು ಪರೀಕ್ಷೆಯನ್ನು ಬರೆಯುವುದಿಲ್ಲ ತರಗತಿಗಳಿಗೆ ಹೋಗುವುದಿಲ್ಲ, ಊಟ ತಿಂಡಿಯನ್ನು ಮಾಡುವುದಿಲ್ಲ ಎಂದು ಪಟ್ಟು ಹಿಡಿದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು ಈ ಪ್ರಾಂಶುಪಾಲರು ಬಂದಮೇಲೆ ತುಂಬಾವವಿದ್ಯಾರ್ಥಿಗಳು ಪ್ರವೇಶ ಪಡೆದು ಸೇರಿಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲನ್ನು ವರ್ಗಾವಣೆ ಮಾಡಿ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಬರುವತನಕ ನಮ್ಮ ಹೋರಾಟ ನಿಲ್ಲುವುದಿಲ್ಲ ಮುಂದುವರಿಯುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ವಸತಿ ಶಾಲೆ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

See also  ಶ್ರೀಲಂಕಾ: ನೂತನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ದಿನೇಶ್ ಗುಣವರ್ಧನಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು