News Kannada
Thursday, March 23 2023

ಮೈಸೂರು

ನಂಜನಗೂಡು: ವೇತನ ಪರಿಷ್ಕರಣೆ ‌ ಮಾಡುವಂತೆ ಆಗ್ರಹಿಸಿ ಚೆಸ್ಕಾಂ ಅಧಿಕಾರಿಗಳು, ನೌಕರರು ಪ್ರತಿಭಟನೆ

Employees, employees of CHESCOM stage protest demanding wage revision
Photo Credit : News Kannada

ನಂಜನಗೂಡು: ವೇತನ ಪರಿಷ್ಕರಣೆ ‌ ಮಾಡುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ಚೆಸ್ಕಾಂ ಅಧಿಕಾರಿಗಳು ಮತ್ತು ನೌಕರರು ಪ್ರತಿಭಟನೆ ನಡೆಸಿದರು.

ನಗರದ ರಾಷ್ಟ್ರಪತಿ ರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಚೇರಿಯ ಮುಂದೆ ಜಮಾಯಿಸಿದ ಚೆಸ್ಕಾಂ ಅಧಿಕಾರಿಗಳು ಹಾಗೂ ನೌಕರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಒಕ್ಕೂಟದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಕೆಪಿಟಿಸಿಎಲ್ ಹಾಗೂ ಎಲ್ಲಾ ಎಸ್ಕಾಂ ಗಳ ಅಧಿಕಾರಿಗಳು ಹಾಗೂ ನೌಕರರಿಂದ ಅನಿರ್ದಿಷ್ಟ ಅವಧಿ ಮುಷ್ಕರವನ್ನು ಮಾಡಲಾಗುತ್ತಿದೆ.

ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ವೇತನ ಪರಿಷ್ಕರಣೆ ಜಾರಿಗೊಳಿಸುವಂತೆ ಆಗ್ರಹಿಸಿ ಅನಿರ್ದಿಷ್ಟವಾದಿ ಮುಷ್ಕರದಲ್ಲಿ ಪಾಲ್ಗೊಳ್ಳಬೇಕು ಎಂದು ನೌಕರರು ತಿಳಿಸಿದರು.

ಚೆಸ್ಕಾಂನ ಕೇಂದ್ರ ಕಾರ್ಯ ಸಮಿತಿ ಸದಸ್ಯ ಮಾದೇಶ್ ಮಾತನಾಡಿ, ಅಧಿಕಾರಿಗಳು ಮತ್ತು ನೌಕರರ ವೇತನ ಪರಿಷ್ಕರಣೆ ಮಾಡಬೇಕು ದಿನಾಂಕ 1-04-2022 ರಿಂದ ಜಾರಿಗೆ ಬರುವಂತೆ ಆದೇಶವನ್ನು ಮಾಡಿ ಅನುಷ್ಠಾನಗೊಳಿಸಬೇಕು. ಇಲ್ಲದಿದ್ದಲ್ಲಿ ಮಾರ್ಚ್ 16 ರಿಂದ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆಯನ್ನು ಮುಂದುವರಿಸಲಾಗುವುದು. ಹಾಗೂ ವಿದ್ಯುತ್ತನ್ನು ಒಂದು ಗಂಟೆಗಳ ಕಾಲ ಸ್ಥಗಿತ ಮಾಡುತ್ತೇವೆ. ಇದಕ್ಕೆ ನೇರ ಸರ್ಕಾರವೇ ಹೊಣೆಯಾಗುತ್ತದೆ ಆದ್ದರಿಂದ ಸಾರ್ವಜನಿಕರು ಹಾಗೂ ಗ್ರಾಹಕರು ನಮ್ಮನ್ನು ದೂರ ಬೇಡಿ. ನೌಕರರು ವಿದ್ಯುತ್ ಮಧ್ಯದಲ್ಲಿ ಜೀವವನ್ನು ತೊರೆದು ಕೆಲಸ ಮಾಡುತ್ತಾರೆ. ಎಷ್ಟೋ ಜನರು ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ. ವರ್ಷಕ್ಕೆ 500 ರಿಂದ 600 ಜನ ನಮ್ಮ ನೌಕರರು ಮೃತಪಟ್ಟಿದ್ದಾರೆ. ನಮ್ಮ ಅಗ್ರಿಮೆಂಟ್ ಏನಾಗಿದೆ ಅದರಂತೆ ನಮಗೆ ವೇತನವನ್ನು ನೀಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಚೆಸ್ಕಾಂ ಗುತ್ತಿಗೆದಾರ ಶಿವಣ್ಣ, ಮಹದೇವಸ್ವಾಮಿ, ರಘುಕುಮಾರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಿರಣ್ ಕುಮಾರ್, ಲೆಕ್ಕಾಧಿಕಾರಿ ಪುಟ್ಟ ಮಾದಯ್ಯ, ಗುರುಮಲ್ಲೇಶ್ ಸೇರಿದಂತೆ ಚೆಸ್ಕಾಂ ನೌಕರರು ಭಾಗವಹಿಸಿದರು.

See also  ಬೆಂಗಳೂರು: ಭಾರತ ಜೋಡೊ ಯಾತ್ರೆಗೆ ರಾಜ್ಯ ಸಮಿತಿ ಅಧ್ಯಕ್ಷರ ಪಟ್ಟಿ ಪ್ರಕಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು